www.bantwalnews.com UPDATES: ಧಾರಾಕಾರ ಮಳೆಗೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಆದ ಭೂಕುಸಿತಕ್ಕೆ ಸಂಬಂಧಿಸಿದಂತೆ, ಸಾವನ್ನಪ್ಪಿದವರ ಸಂಖ್ಯೆ ಗುರುವಾರ ಬೆಳಗಿನ ಹೊತ್ತಿಗೆ ಮೂರಕ್ಕೆ ಏರಿದೆ.ಕೇರಳದ ಪಾಲಕ್ಕಾಡ್ ನಿವಾಸಿ ಬಿಜು (45) ಬುಧವಾರ ರಾತ್ರಿಯೇ ಸಾವನ್ನಪ್ಪಿದರು. ತಡವಾಗಿ ರಕ್ಷಿಸಿದ ಅಲಪ್ಪುರದ ಸಂತೋಷ್ (46) ಮತ್ತು ಕೊಟ್ಟಾಯಂನ ಬಾಬು (46) ಅವರೂ ಮೃತಪಟ್ಟಿದ್ದಾರೆ.ಕಣ್ಣೂರಿನ ಜಾನಿ (44) ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.