ವಿಟ್ಲ

ಮಳೆ ಪ್ರವಾಹಕ್ಕೆ ಕೊಚ್ಚಿ ಹೋದ ಕಲ್ಲಾಜೆ-ಮಡ್ಯಾರಬೆಟ್ಟು ಸೇತುವೆ

ಪುಣಚ ಗ್ರಾಮ ವ್ಯಾಪ್ತಿಗೊಳಪಡುವ ದೇವಿನಗರ-ಕಲ್ಲಾಜೆ-ಮಡ್ಯಾರಬೆಟ್ಟು-ಆಜೇರು ಮೂಲಕ ಸಾರ್ಯಕ್ಕೆ ಸಾಗುವ ರಸ್ತೆಯ ಮಡ್ಯಾರಬೆಟ್ಟು ಕಿರು ಸೇತುವೆಯೊಂದು ಮಳೆ ನೀರಿನ ಪ್ರವಾಹದ ಹೊಡೆತಕ್ಕೆ ಸಿಲುಕಿ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದ್ದು, ಈ ಸೇತುವೆಯನ್ನು ಬಳಸುವ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೊಳಪಡುವ ಪ್ರದೇಶದ ಈ ಸೇತುವೆಯನ್ನು 2013-2014 ರಲ್ಲಿ ಸಂಸದರ 5 ಲಕ್ಷ ಹಾಗೂ ಜಿ.ಪಂ.ನ 3  ಲಕ್ಷ ಅನುದಾನದಲ್ಲಿ ನಿರ್ಮಿಸಲಾಗಿತ್ತು. ಹತ್ತು ವರ್ಷ ತುಂಬುವುದರೊಳಗೆ ಮಳೆನೀರಿಗೆ ಆಹುತಿಯಾಗಿದೆ. ಇದರಿಂದಾಗಿ ಆಜೇರು ಭಾಗದಿಂದ ಪುಣಚಕ್ಕೆ ಬರುವ, ಕಲ್ಲಾಜೆಯಿಂದ ಸಾಜ ಮೂಲಕ ಪುತ್ತೂರು ಹಾಗೂ ಇತರೆಡೆ ಗಳಿಗೆ ಸಾಗುವ ಜನರ ಸಂಚಾರಕ್ಕೆ ಸಂಚಕಾರ ಬಂದೊದಗಿದೆ. ಈ ಪ್ರದೇಶದಲ್ಲಿಯ ನಿತ್ಯ ಸಂಚಾರಿಗಳಿಗೆ, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ, ಉದ್ಯೋಗಸ್ಥರಿಗೆ ಸಂಪರ್ಕ ಕಡಿತಗೊಂಡಿರುವುದರಿಂದ ಸಂಕಟ ಪಡುವಂತಾಗಿದೆ. ಪುಣಚ ಗ್ರಾಮದ ಕಲ್ಲಾಜೆ, ಮಲೆತ್ತಡ್ಕ,ಪೊಯ್ಯಮೂಲೆ ಇನ್ನಿತರ ಪ್ರದೇಶಗಳಲ್ಲಿಯೂ ಮಳೆಹಾನಿ ಸಂಭವಿಸಿದ್ದು ಮನೆ, ಕೃಷಿಭೂಮಿ ಗಳಿಗೆ ಹಾನಿಯಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷರು,ವಾರ್ಡ್ ಸದಸ್ಯರುಗಳು ಪಿಡಿಒ,ಗ್ರಾಮ ಕರಣಿಕರೊಂದಿಗೆ ಮಳೆಹಾನಿ ಪ್ರದೇಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗತ್ಯ ತುರ್ತು ಕ್ರಮ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

15 hours ago