ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಹನ್ನೊಂದು ದಿನಗಳಿಂದ ಸುರಿಯುತ್ತಿರುವ ಮಳೆ ಮುಂದುವರಿದಿದ್ದು, ಬಂಟ್ವಾಳ ತಾಲೂಕಿನಲ್ಲಿ ಹರಿಯುವ ನೇತ್ರಾವತಿ ನದಿ ಅಪಾಯದ ಮಟ್ಟಕ್ಕೆ ಸನಿಹ ತಲುಪಿದೆ. ಇದರಿಂದ ಬಂಟ್ವಾಳದಲ್ಲಿ ನೆರೆಭೀತಿ ಎದುರಾಗಿದೆ. ಭಾನುವಾರ ಬೆಳಗ್ಗೆ 8.4 ಮೀಟರ್ ಎತ್ತರದಲ್ಲಿ ನದಿ ಹರಿಯುತ್ತಿದ್ದು, ಅಪಾಯದ ಮಟ್ಟ 8.5 ಆಗಿದೆ.ಇದರಿಂದ ಬಂಟ್ವಾಳ ತಾಲೂಕಿನಲ್ಲಿ ಪ್ರತಿ ಬಾರಿಯೂ ಅಪಾಯದ ಮಟ್ಟ ತಲುಪಿದಾಗ ನೆರೆ ಭೀತಿ ಎದುರಿಸುವ ಜಾಗಗಳಾದ ಬಡ್ಡಕಟ್ಟೆ, ಬಸ್ತಿಪಡ್ಪು, ಆಲಡ್ಕ, ನಾವೂರು ಸಹಿತ ಹಲವು ಪ್ರದೇಶಗಳಲ್ಲಿ ಈಗ ಪ್ರವಾಹದ ಆತಂಕ ಎದುರಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "BREAKING: ಅಪಾಯದ ಮಟ್ಟದ ಸನಿಹಕ್ಕೆ ಬಂದ ನೇತ್ರಾವತಿ: ಬಂಟ್ವಾಳದಲ್ಲಿ ನೆರೆಭೀತಿ"