ಕಳೆದ ಸುಮಾರು ಹನ್ನೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನ ಅಲ್ಲಲ್ಲಿ ಪ್ರಾಕೃತಿಕ ವಿಕೋಪದಿಂದ ತೊಂದರೆಗಳು ಉದ್ಭವಿಸುತ್ತಿವೆ.
ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಗುಡ್ಡ ಕುಸಿತ, ಮನೆಗಳು ಹಾನಿಯಾಗಿರುವ ಗ್ರಾಮಗಳಾದ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮುಡೂರು, ಪಂಜಿಕಲ್ಲು ಗ್ರಾಮಗಳು ಹಾಗೂ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು.
ಈ ಸಂದರ್ಭ ದ.ಕ.ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ಕರೆ ಮಾಡಿದ ಅವರು ಸೂಕ್ತ ಪರಿಹಾರ ಹಾಗೂ ಸುರಕ್ಷತೆಗೆ ಗರಿಷ್ಠ ಒತ್ತು ನೀಡಲು ಒತ್ತಾಯಿಸಿದರು.
ಜಾಹೀರಾತು
ಪ್ರಮುಖರಾದ ಪದ್ಮಶೇಖರ ಜೈನ್, ಬೇಬಿ ಕುಂದರ್,ಚಂದ್ರಶೇಖರ ಕರ್ಣ, ಮಾಣಿಕ್ಯರಾಜ್ ಜೈನ್, ಜನಾರ್ದನ ಸಪಲ್ಯ ಮತ್ತಿತರರು ಈ ಸಂದರ್ಭ ಇದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಪಾಯದಲ್ಲಿ ಮನೆಗಳು, ಗುಡ್ಡ ಕುಸಿತದ ಭೀತಿ: ಮಾಜಿ ಸಚಿವ ರೈ ನೇತೃತ್ವದಲ್ಲಿ ತಂಡ ಪರಿಶೀಲನೆ"