ಬಂಟ್ವಾಳ

ಅಪಾಯದಲ್ಲಿ ಮನೆಗಳು, ಗುಡ್ಡ ಕುಸಿತದ ಭೀತಿ: ಮಾಜಿ ಸಚಿವ ರೈ ನೇತೃತ್ವದಲ್ಲಿ ತಂಡ ಪರಿಶೀಲನೆ

ಕಳೆದ ಸುಮಾರು ಹನ್ನೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನ ಅಲ್ಲಲ್ಲಿ ಪ್ರಾಕೃತಿಕ ವಿಕೋಪದಿಂದ ತೊಂದರೆಗಳು ಉದ್ಭವಿಸುತ್ತಿವೆ.

ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಗುಡ್ಡ ಕುಸಿತ, ಮನೆಗಳು ಹಾನಿಯಾಗಿರುವ ಗ್ರಾಮಗಳಾದ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮುಡೂರು, ಪಂಜಿಕಲ್ಲು ಗ್ರಾಮಗಳು ಹಾಗೂ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು.

ಈ ಸಂದರ್ಭ ದ.ಕ.ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ಕರೆ ಮಾಡಿದ ಅವರು ಸೂಕ್ತ ಪರಿಹಾರ ಹಾಗೂ ಸುರಕ್ಷತೆಗೆ ಗರಿಷ್ಠ ಒತ್ತು ನೀಡಲು ಒತ್ತಾಯಿಸಿದರು.

ಜಾಹೀರಾತು

ಪ್ರಮುಖರಾದ ಪದ್ಮಶೇಖರ ಜೈನ್, ಬೇಬಿ ಕುಂದರ್,ಚಂದ್ರಶೇಖರ ಕರ್ಣ, ಮಾಣಿಕ್ಯರಾಜ್ ಜೈನ್, ಜನಾರ್ದನ ಸಪಲ್ಯ ಮತ್ತಿತರರು ಈ ಸಂದರ್ಭ ಇದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.