ಪಂಜಿಕಲ್ಲು ದುರಂತ: ಮೃತರ ಕುಟುಂಬಗಳಿಗೆ ಸಿಎಂ ಬೊಮ್ಮಾಯಿ ಅವರಿಂದ 5 ಲಕ್ಷ ರೂ ಚೆಕ್ ವಿತರಣೆ

ಬಂಟ್ವಾಳ: ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ ಕೇರಳದ ಮೂವರು ಕಾರ್ಮಿಕರಿಗೆ ತಲಾ 5 ಲಕ್ಷ ರೂ ನಂತೆ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಂಟ್ವಾಳದ ಪ್ರವಾಸಿ ಬಂಗ್ಲೆಯಲ್ಲಿ ಮಂಗಳವಾರ ಸಂಜೆ ವಿತರಿಸಿದರು.

ಜಡಿಮಳೆಗೆ ಗುಡ್ಡ ಜರಿದು ಮನೆಯ ಮೇಲೆ ಬಿದ್ದ  ಪರಿಣಾಮ ಅದರಲ್ಲಿ ವಾಸವಿದ್ದ ಕೇರಳ ಮೂಲದ ನಾಲ್ವರು ರಬ್ಬರ್ ಟ್ಯಾಪಿಂಗ್  ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ ಘಟನೆ ಜುಲೈ 6ರಂದು ಬುಧವಾರ ರಾತ್ರಿ ನಡೆದಿದ್ದು, ಸತತ ಕಾರ್ಯಾಚರಣೆ ಬಳಿಕ ಎಲ್ಲರನ್ನೂ ಮಣ್ಣಿನಡಿಯಿಂದ ಹೊರತೆಗೆದರೂ ಮೂವರು ಮೃತಪಟ್ಟಿದ್ದರು. ಬಿಜು ಪಾಲಕ್ಕಡ್ , ಸಂತೋಷ್ ಅಲಪುರ, ಬಾಬು ಕೊಟ್ಟಾಯಂ ಅವರ ಕುಟುಂಬ ಸದಸ್ಯರು ಪರಿಹಾರ ಚೆಕ್ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಸಚಿವರಾದ ಆರ್ ಆಶೋಕ್, ಎಸ್.ಆಂಗಾರ, ಸುನಿಲ್ ಕುಮಾರ್, ಸಿ‌ಸಿ.ಪಾಟೀಲ್, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ , ಸಂಜೀವ ಮಠಂದೂರು, ವಿಧಾನಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್, ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಜಿಪಂ ಸಿಇಒ ಡಾ. ಕುಮಾರ್, ಸಹಾಯಕ ಕಮೀಷನರ್ ಮದನ್ ಮೋಹನ್, ಪ್ರಮುಖರಾದ ಪ್ರಮೋದ್ ಮಧ್ವರಾಜ್, ಹರಿಕೃಷ್ಣ ಬಂಟ್ವಾಳ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಹರಿಕೃಷ್ಣ ಬಂಟ್ವಾಳ, ಸಂತೋಷ್ ಕುಮಾರ್ ಬೋಳಿಯಾರು, ಸುಲೋಚನ ಜಿ.ಕೆ.ಭಟ್,  ದೇವದಾಸ್ ಶೆಟ್ಟಿ , ರವೀಶ್ ಶೆಟ್ಟಿ ಕರ್ಕಳ,ಡೊಂಬಯ್ಯ ಅರಳ, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ರಮನಾಥ ರಾಯಿ, ಪ್ರಕಾಶ್ ಅಂಚನ್, ರಂಜನ್ ಕುಮಾರ್ ಶೆಟ್ಟಿ ಅರಳ, ಪುಷ್ಪರಾಜ ಚೌಟ, ಸುದರ್ಶನ ಬಜ,ಎ.ಗೋವಿಂದ ಪ್ರಭು, ಉದಯಕುಮಾರ್ ರಾವ್, ದಿನೇಶ್ ಶೆಟ್ಟಿ ದಂಬೆದಾರ್,  ಅಜಿತ್ ಶೆಟ್ಟಿ, ಅನಂದ ಶಂಭೂರು, ಸುರೇಶ್ ಬಂಟ್ವಾಳ, ಉಮೇಶ್ ಅರಳ, ಕಾರ್ತಿಕ್ ಬಳ್ಳಾಲ್, ವಿಕಾಸ್ ಪುತ್ತೂರು, ಸಂಜೀವ ಪೂಜಾರಿ, ಸದಾನಂದ ನಾವೂರ, ಹರೀಶ್ ರಾಯಿ, ಲೋಹಿತ್ ಕೊಳ್ನಾಡು, ಶಿವಪ್ರಸಾದ್ ಶೆಟ್ಟಿ ಅನೆಯಾಲಕೋಡಿ,  ಜಿನೇಂದ್ರ ಜೈನ್, ತಹಶೀಲ್ದಾರ್ ಡಾ. ಸ್ಮಿತಾ ರಾಮು, ತಾಪಂ ಇ‌ಒ.ರಾಜಣ್ಣ , ಮುಖ್ಯಾಧಿಕಾರಿ ಎ.ಅರ್.ಸ್ವಾಮಿ, ಮೆಸ್ಕಾಂ ಇ‌ಇ.ಪ್ರಶಾಂತ್ ಪೈ, ಕೆ.ಎಸ್.ಆರ್.ಟಿ.ಸಿ.ಡಿಪೋ ಮ್ಯಾನೇಜರ್ ಶ್ರೀಶ ಭಟ್,  ಕೃಷಿ .ಎ.ಡಿ. ನಂದನ್ ಶೆಣೈ, ತೋಟಗಾರಿಕಾ ಅಧಿಕಾರಿ ಪ್ರದೀಪ್ ಡಿ.ಸೋಜ, ಲೋಕೋಪಯೋಗಿ ಎ.ಇ.ಇ.ಷಣ್ಮುಗಂ, ಪಂ.ರಾಜ್ ಎಇಇ ತಾರಾನಾಥ್ ಸಾಲಿಯಾನ್, ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಡಿ.ವೈ.ಎಸ್. ಪಿ.ಪ್ರತಾಪ್ ಥೋರಾಟ್, ಇನ್ಸ್ ಪೆಕ್ಟರ್ ಗಳಾದ ವಿವೇಕಾನಂದ, ಟಿ.ಡಿ. ನಾಗರಾಜ್ , ಶಿವಕುಮಾರ್, ಎಸ್.ಐ.ಗಳಾದ  ನಂದಕುಮಾರ್,  ಅವಿನಾಶ್, ಹರೀಶ್, ಮೂರ್ತಿ, ಸಂಜೀವ, ಕಲೈಮಾರ್, ಭಾರತಿ, ಪಂಜಿಕಲ್ಲು ಪಿ.ಡಿ.ಒ.ಶ್ರೀವಿದ್ಯಾ, ವಿಎ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಂಜಿಕಲ್ಲು ದುರಂತ: ಮೃತರ ಕುಟುಂಬಗಳಿಗೆ ಸಿಎಂ ಬೊಮ್ಮಾಯಿ ಅವರಿಂದ 5 ಲಕ್ಷ ರೂ ಚೆಕ್ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*