ಪ್ರಾಕೃತಿಕ ವಿಕೋಪದಿಂದ ಹಾನಿ – ಗರಿಷ್ಠ ಪ್ರಮಾಣದ ಪರಿಹಾರಕ್ಕೆ ವ್ಯವಸ್ಥೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದವರಿಗೆ ಗರಿಷ್ಠ ಪ್ರಮಾಣದ ಪರಿಹಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಪಾಕೃತಿಕ ವಿಕೋಪದಲ್ಲಿ ಅತೀ ಹೆಚ್ಚು  ಹಾನಿಯಾದ ಬಂಟ್ವಾಳ ತಾಲೂಕಿನ ಕಾವಳಪಡೂರು,ಅರಳ, ಸಂಗಬೆಟ್ಟು , ಕಾಡಬೆಟ್ಟು   ಗ್ರಾಮಗಳಿಗೆ ತೆರಳಿದ ಅವರು ಬಳಿಕ ಪರಿಶೀಲನೆ ನಡೆಸಿದರು.

ಅರಳ ಗ್ರಾಮದ ಪೊರ್ಕಳ ಬಂಡಶಾಲೆ ರಸ್ತೆ, ನವಗ್ರಾಮದ ಮನೋಹರ ಕುಲಾಲ್ ಅವರ ಗುಡ್ಡ ಕುಸಿತ, ತಿಮ್ಮಪ್ಪ ನಾಯ್ಕ್ ಹಾಗೂ ರಾಮ ಶೆಟ್ಟಿಗಾರ್ ಮನೆಗೆ ಹಾನಿ, ರೊಡಾಲ್ಪೋ ಅವರ ಮನೆಗೆ ಹಾನಿ, ರಿಯಾಜ್  ಮನೆಗೆ ಹಾನಿ, ರೊನಾಲ್ಡ್ ಮನೆಗೆ ಹಾನಿ, ಅಪ್ಪು ನಾಯ್ಕ್ ಕಂಪೌಂಡ್, ಸಂಗಬೆಟ್ಟು ಗ್ರಾಮದ ಗಾಡಿಪಲ್ಕೆ ನೋಣಯ್ಯ ಮೂಲ್ಯ ಅವರ ಮನೆಗೆ ಹಾನಿ,  ಕಾಡಬೆಟ್ಟು ಗ್ರಾಮದ ಬೊಗ್ರುಕುಮೇರು ಗಣೇಶ್ ಎಂಬವರ ಮನೆಗೆ ಹಾನಿ, ಬೋಗ್ರುಕುಮೇರು ಗೋಪಾಲ ಎಂಬವರ ಮನೆಗೆ ಹಾನಿ, ಕಾವಳಪಡೂರು ಗ್ರಾಮದ ಕುಳಿಂಜಿಲಕೋಡಿ ರಘು ಮೊಗರ ಅವರ ಮನೆಗೆ ಹಾನಿ, ಕುಲಿಂಜಿಲಕೋಡಿ  ರಾಜೇಶ್ವರಿ ಎಂಬವರ ಮನೆಗೆ ಹಾನಿಯಾನಿ, ಪದ್ಮಾವತಿ ವಸಂತ ಅವರ ಮನೆಗೆ ಹಾನಿಯಾಗಿದ್ದು ಇವರ ಮನೆಗೆ ಶಾಸಕರು ಅಧಿಕಾರಿಗಳ ಜೊತೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಜಾಹೀರಾತು

  ಈ ಹಿಂದೆ ಕನಿಷ್ಠ ಪ್ರಮಾಣದಲ್ಲಿ ಪರಿಹಾರವನ್ನು ನೀಡುತ್ತಿದ್ದು, ಅದು ಸಾಕಾಗುವುದಿಲ್ಲ ಎಂಬ ಕಾರಣದಿಂದ ಸಿ.ಎಂ.ಬೊಮ್ಮಾಯಿ ನೇತೃತ್ವದ ಸರಕಾರ ಅಧಿಕಾರಿಗಳ ಮೂಲಕ  ನಷ್ಟದ ಸಂಪೂರ್ಣ ಮಾಹಿತಿ ಪಡೆದ ಬಳಿಕ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಲು ಮುಂದಾಗಿದೆ. ಪ್ರತಿ ಗ್ರಾಮದಲ್ಲಿ ಹಾನಿಯಾದ ವಿವರಗಳನ್ನು ಅಧಿಕಾರಿಗಳು  ವರದಿ ನೀಡಲು ಸೂಚಿಸಿದ್ದೇನೆ.  ಜೊತೆಗೆ ಹಾನಿಯಾದ ಸಂದರ್ಭದಲ್ಲಿ ಸ್ಥಳದಲ್ಲಿಯೇ 10 ಸಾವಿರ ಹಣವನ್ನು ನೀಡುವಂತೆ ಸರಕಾರ ಅದೇಶ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲು  ತಾಲೂಕಿನ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪ್ರಮುಖರಾದ ಅಜಿತ್ ಕುಮಾರ್, ಶರ್ಮಿತ್ ಜೈನ್, ಪ್ರಮೋದ್ ಕುಮಾರ್ ರೈ, ದಿನೇಶ್ ಕಾಡಬೆಟ್ಟು, ಜಿನೇಂದ್ರ ಜೈನ್, ಸುಲೋಚನ ಜಿ.ಕೆ.ಭಟ್,  ಸುದರ್ಶನ್ ಬಜ , ಲಕ್ಮೀಧರ ಶೆಟ್ಟಿ, ಜಗದೀಶ್ ಅಳ್ವ, ಉಮೇಶ್ ಅರಳ, ಪ್ರಸನ್ನ ಶೆಟ್ಟಿ, ಸತೀಶ್ ಪೂಜಾರಿ, ವಿಮಲ ಮೋಹನ್, ರತ್ನಕುಮಾರ್ ಚೌಟ, ವಸಂತ ಅಣ್ಣಳಿಕೆ, ಪಿ.ಡಿ.ಒ.ಪಂಕಜಾ ಶೆಟ್ಟಿ, ಗ್ರಾಮ ಕರಣೀಕೆ ಆಶಾ ಮೆಹಂದಲೆ, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಕರಣೀಕ ಅಮೃತ್ ವಂಶು, ಪಿ.ಡಿ.ಒ.ಧರ್ಮರಾಜ್, ಗ್ರಾಮ ಕರಣೀಕ ಪರೀಕ್ಷಿತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪ್ರಾಕೃತಿಕ ವಿಕೋಪದಿಂದ ಹಾನಿ – ಗರಿಷ್ಠ ಪ್ರಮಾಣದ ಪರಿಹಾರಕ್ಕೆ ವ್ಯವಸ್ಥೆ: ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*