ವಾಮದಪದವು

ಸಿದ್ಧಕಟ್ಟೆ ಸ.ಪ.ಪೂ.ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ಬಂಟ್ವಾಳ: ಸಿದ್ಧಕಟ್ಟೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ಎನ್ ಎಸ್ ಎಸ್ ಘಟಕದ ಉದ್ಘಾಟನಾ ಸಮಾರಂಭವು ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ಪ್ರಿನ್ಸಿಪಾಲ್ ಸರಸ್ವತಿ ಉದ್ಘಾಟನೆ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಭಾಕರ ಪ್ರಭು ಮಾತನಾಡಿ, ವಿದ್ಯಾರ್ಥಿಗಳು ಅಂಕ ಗಳಿಕೆಯೊಂದಿಗೆ ಜೀವನ ಪಾಠಗಳನ್ನು ಕಲಿಯಬೇಕು ಎಂದರು.

ಪ್ರಾಚಾರ್ಯ ಉದಯ ಕುಮಾರ್ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಜಾಹೀರಾತು

ಸಮಾರಂಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ, ನಿತ್ಯಾನಂದ ಪೂಜಾರಿ ಕೆಂತಲೆ, ಮಂದಾರತಿ ಶೆಟ್ಟಿ, ಬೇಬಿ ದೇವಸ್ಯ, ವಸಂತಿ ಹೆನ್ನೂರುಪದವು, ಹಿರಿಯ ಉಪನ್ಯಾಸಕರಾದ ಶ್ರೀನಿವಾಸ ನಾಯ್ಕ ಹಾಗೂ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶೀನಪ್ಪ ಎನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಿಯಾ ಸ್ವಾಗತಿಸಿದರು. ರಕ್ಷಾ ಉದ್ಘಾಟಕರನ್ನು ಪರಿಚಯಿಸಿದರು. ರೂಪೇಶ್ ಕುಮಾರ್ ವಂದಿಸಿದರು. ವೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts