- ಬುಧವಾರ ಬೆಳಗಿನ ಜಾವ ನಡೆದ ಘಟನೆ
ಬಂಟ್ವಾಳ: ಬುಧವಾರ ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ ನ ಸೇತುವೆ ಬಳಿ ಪಾಣೆಮಂಗಳೂರಿಗೆ ಹೋಗುವ ಜಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ಹೊಂಡಕ್ಕೆ ಉರುಳಿಬಿದ್ದಿದೆ.
ಸ್ಥಳೀಯ ನಿವಾಸಿ ಕುಶಾಂತ್ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಬಿದ್ದಿದ್ದು, ಚಾಲಕ ಅದೃಷ್ಟವಶಾತ್ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಆಳವಾದ ಹೊಂಡಕ್ಕೆ ಕಾರು ಉರುಳಿಬಿದ್ದಿದೆ. ಬಳಿಕ ಗಜಲಕ್ಷ್ಮೀ ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಯಿತು. ಈ ಸಂದರ್ಭ ಬೆಳಗ್ಗಿನ ಹೊತ್ತಿನಲ್ಲಿ ಕಾರನ್ನು ನೋಡಲು ಜನ ಜಮಾಯಿಸಿದ್ದು, ಪೊಲೀಸರು ಆಗಮಿಸಿ ಪರಿಸ್ಥಿತಿ ನಿಭಾಯಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಹೆದ್ದಾರಿ ಬಳಿ ಮಗುಚಿದ ಕಾರು, ಚಾಲಕ ಪಾರು"