ದ.ಕ.ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಂಗಳೂರು ಶಾರದಾ ವಿದ್ಯಾಲಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸ್ಪರ್ಧೆಗಳು

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವಾಚರಣೆಯ ಸಲುವಾಗಿ ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರರಚನೆ, ಸ್ವಾತಂತ್ರ್ಯ ಹೋರಾಟಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕೊಡುಗೆ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ, ದೇಶಭಕ್ತಿಗೀತೆಗಳ ಗಾಯನ ಸ್ಪರ್ಧೆ ಮತ್ತು ಭಾರತ ಪರಿಚಯ ಎಂಬ ರಸಪ್ರಶ್ನೆ ಸ್ಪರ್ಧೆಗಳು ನಡೆಯಲಿವೆ.

ಸ್ಪರ್ಧೆಗಳ ವಿವರ ಹೀಗಿದೆ

ಜಾಹೀರಾತು

ಭಾವಚಿತ್ರ ರಚನೆ:

ಭಗತ್ ಸಿಂಗ್, ಸುಭಾಶ್ಚಂದ್ರ ಭೋಸ್, ಚಂದ್ರಶೇಖರ ಆಜಾದ್, ಬಾಲಗಂಗಾಧರ ತಿಲಕ್, ಮಂಗಲ್ ಪಾಂಡೆ, ಸರ್ದಾರ್ ವಲ್ಲಭಭಾ ಪಟೇಲ್, ವಿನಾಯಕ ದಾಮೋದರ್ ಸಾವರ್ಕರ್, ಸುಖ್‌ದೇವ್ ಇವರಲ್ಲಿ ಯಾರಾದರೂ ಒಬ್ಬರ ಭಾವಚಿತ್ರವನ್ನು ರಚಿಸುವುದು. ಚಿತ್ರವನ್ನು ಪೆನ್ಸಿಲ್ ಶೇಡಿಂಗ್, ಚಾರ್‍ಕೋಲ್, ಕ್ರೇಯಾನ್ಸ್, ಜಲವರ್ಣ, ಆಕ್ರಿಲಿಕ್‌ವರ್ಣ ಹೀಗೆ ಯಾವುದೇ ಮಾಧ್ಯಮದಿಂದ ಪೂರ್ಣಗೊಳಿಸಬಹುದು. ಚಿತ್ರದ ಫೊಟೋವನ್ನು ವಾಟ್ಸಾಪ್ ಸಂಖ್ಯೆ 9019730479ಕ್ಕೆ ಕಳುಹಿಸಬೇಕು.

ಭಾಷಣ ಸ್ಪರ್ಧೆ:

ಜಾಹೀರಾತು

ಸ್ವಾತಂತ್ರ್ಯ ಹೋರಾಟಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕೊಡುಗೆ ಎಂಬ ವಿಷಯದ ಬಗ್ಗೆ ಕನ್ನಡ ಅಥವಾ ಇಂಗ್ಲೀಷ್‌ನಲ್ಲಿ ಮೂರು ನಿಮಿಷಗಳಿಗೆ ಮೀರದಂತೆ ಭಾಷಣ ಮಾಡುವುದು. ಭಾಷಣದ ವೀಡಿಯೋವನ್ನು ವಾಟ್ಸಾಪ್ ಸಂಖ್ಯೆ 9019730479ಕ್ಕೆ ಕಳುಹಿಸಬೇಕು. ಭಾಷಾಶುದ್ಧಿ, ಉಚ್ಚಾರ, ಸ್ಪಷ್ಟತೆ ಮತ್ತು ಪ್ರಸ್ತುತಿಗಳನ್ನು ಗಮನಿಸಲಾಗುವುದು.

ದೇಶಭಕ್ತಿಗೀತೆ:

ಕನ್ನಡ ಅಥವಾ ಹಿಂದಿ ಭಾಷೆಯ ದೇಶಭಕ್ತಿಗೀತೆಯನ್ನು ಹಾಡುವುದು. ಶ್ರುತಿಯನ್ನು ಬಳಸಿಕೊಳ್ಳಬಹುದು. ಶ್ರುತಿಯನ್ನು ಹೊರತುಪಡಿಸಿ ಯಾವುದೇ ಹಿನ್ನೆಲೆ ಸಂಗೀತ/ಕರೋಕೆ/ಟ್ರ್ಯಾಕ್ ಬಳಸುವಂತಿಲ್ಲ. ಸಮಯಾವಕಾಶ ೩ ನಿಮಿಷಗಳು. ಹಾಡಿನ ವೀಡಿಯೋವನ್ನು ಸಂಖ್ಯೆ 9019730479 ಕ್ಕೆ ಕಳುಹಿಸಬೇಕು.

ಜಾಹೀರಾತು

ಸ್ಪರ್ಧೆಗೆ ಚಿತ್ರ, ಭಾಷಣ ಮತ್ತು ದೇಶಭಕ್ತಿಗೀತೆಗಳ ವೀಡಿಯೋದೊಂದಿಗೆ ವಿದ್ಯಾರ್ಥಿಯ ಹೆಸರು, ತರಗತಿ, ಶಾಲೆ ಮೊಬೈಲ್ ಸಂಖ್ಯೆಗಳನ್ನು ಕಳುಹಿಸಬೇಕು. ಸ್ಪಧೆಗಳಲ್ಲಿ ಭಾಗವಹಿಸುವುದಕ್ಕೆ ಅಂತಿಮ ದಿನಾಂಕ 27 ಜುಲೈ 2022. ಎಲ್ಲಾ ಸ್ಪರ್ಧೆಗಳಲ್ಲೂ ಹತ್ತು ಉತ್ತಮ ಪ್ರತಿಭೆಗಳನ್ನು ಅಂತಿಮ ಸುತ್ತಿನ ಸ್ಪರ್ಧೆಗೆ ಆಯ್ಕೆ ಮಾಡಲಾಗುವುದು. ಅಂತಿಮ ಸುತ್ತಿನ ಸ್ಪರ್ಧೆಯು ಸ್ವಾತಂತ್ರ್ಯೋತ್ಸವದಂದು ಶಾರದಾ ವಿದ್ಯಾಲಯದಲ್ಲಿ ಪೂರ್ವಾಹ್ನ ಗಂಟೆ 9.30ಕ್ಕೆ ನಡೆಯಲಿದೆ.

ರಸಪ್ರಶ್ನೆ:

ಪುರಾಣ-ಇತಿಹಾಸ, ಋಷಿ ಪರಂಪರೆ, ಭಾರತದ ರಾಜ-ಮಹಾರಾಜರು, ನದಿ-ಪರ್ವತಗಳು, ಪವಿತ್ರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳಿರುತ್ತವೆ. ಇಬ್ಬರು ವಿದ್ಯಾರ್ಥಿಗಳ ತಂಡಗಳಾಗಿ ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಹೆಸರು(ಇಬ್ಬರ ಹೆಸರು), ತರಗತಿ, ಶಾಲೆಯ ಹೆಸರು, ಮೊಬೈಲ್ ಸಂಖ್ಯೆಗಳನ್ನು ದಿನಾಂಕ 27 ಜುಲೈ 2022ರ ಒಳಗೆ ವಾಟ್ಸಾಪ್ ಸಂಖ್ಯೆ 9019730479ಕ್ಕೆ ಕಳುಹಿಸಿ ನೋಂದಾಯಿಸಬೇಕು. ಪ್ರಥಮ ಸುತ್ತಿನ ಬಹುಆಯ್ಕೆಯ ಉತ್ತರಗಳನ್ನೊಳಗೊಂಡ(ಒಅಕಿ) ಲಿಖಿತ ಪರೀಕ್ಷೆಯಲ್ಲಿ ತಂಡದ ಇಬ್ಬರು ಸೇರಿ ಉತ್ತರಿಸಬೇಕು. ತಂಡದ ಸದಸ್ಯರಿಬ್ಬರೂ ಒಂದೇ ಶಾಲೆಯ ವಿದ್ಯಾರ್ಥಿಗಳಾಗಿರಬೇಕು.  ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಐದು ತಂಡಗಳಿಗೆ ಮೌಖಿಕ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಗುವುದು. ಸ್ಪರ್ಧೆಯು ದಿನಾಂಕ ೧೫ ಆಗಸ್ಟ್ 2022ರಂದು ಶಾರದಾ ವಿದ್ಯಾಲಯದಲ್ಲಿ ಪೂರ್ವಾಹ್ನ ಗಂಟೆ 9.30ಕ್ಕೆ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಶಾರದಾ ವಿದ್ಯಾಲಯದ ಕಾರ್ಯಾಲಯವನ್ನು ದೂರವಾಣಿ ಸಂಖ್ಯೆ 0824-2492628/2493089 ಅಥವಾ ಮೊಬೈಲ್ ಸಂಖ್ಯೆ 9019730479 / 9448889254 ಮೂಲಕ ಸಂಪರ್ಕಿಸಬಹುದು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದ.ಕ.ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಂಗಳೂರು ಶಾರದಾ ವಿದ್ಯಾಲಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸ್ಪರ್ಧೆಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*