ಬಂಟ್ವಾಳ

ಚೇಳೂರು :ಸೇತುವೆ ಕಾಮಗಾರಿ ಪರಿಶೀಲಿದ ಶಾಸಕ ಖಾದರ್

ಚೇಳೂರು -ಇರಾ ಸಂಪರ್ಕ ರಸ್ತೆಯ ಚೇಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿಯಿಂದಾಗಿ ಸಾರ್ವಜನಿಕರ ಪ್ರಯಾಣಕ್ಕೆ ಆಗುತ್ತಿರುವ ತೊಂದರೆಗಳ ಬಗ್ಗೆ ಆಸುಪಾಸಿನವರ ಮನವಿಯಂತೆ ವಿಪಕ್ಷ ಉಪನಾಯಕರೂ ಮಂಗಳೂರು ಶಾಸಕರಾದ ಯು ಟಿ ಖಾದರ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ತಿಗೊಳಿಸಿ ಹಾಗೂ ಕಾಮಗಾರಿಯು ನಡೆಯುವ ಅವಧಿಯಲ್ಲಿ ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್ ಆಳ್ವ, ಅಬ್ದುಲ್ ಜಬ್ಬಾರ್ ಬೋಳಿಯಾರ್, ಮುಡಿಪು ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೊಂಟುಗೋಳಿ, ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಕ್ ಕುಕ್ಕಾಜೆ, ಬೋಳಿಯಾರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಕೂರ್, ಪಕ್ಷದ ಮುಖಂಡರಾದ ಆಲ್ವಿನ್ ದೇರಳಕಟ್ಟೆ, ಮುರಲೀಧರ ಶೆಟ್ಟಿ ಮೋರ್ಲ,ಶಾಫಿ ಪಾನೇಲ ಹಾಗೂ ಸ್ಥಳೀಯ ನಾಗರಿಕರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.