ರಾಷ್ಟ್ರಧ್ವಜ ಅಪಮಾನ ತಡೆಗಟ್ಟಲು ಕ್ರಮ ಕೈಗೊಳ್ಳಿ: ಹಿಂದು ಜನಜಾಗೃತಿ ಸಮಿತಿ ಮನವಿ

ಬಂಟ್ವಾಳ: ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ರಾಷ್ಟ್ರ ಧ್ವಜದ ಅಪಮಾನ ತಡೆಗಟ್ಟಲು  ನ್ಯಾಯಾಲಯದ ಆದೇಶದಂತೆ ಮತ್ತು ಕೇಂದ್ರ ಸರಕಾರದ ಪ್ಲಾಸ್ಟಿಕ್ ನಿಷೇಧ ನಿರ್ಧಾರದಂತೆ ಕ್ರಮ ಕೈಗೊಳ್ಳುವ ಬಗ್ಗೆ ಬಂಟ್ವಾಳದ ಉಪತಹಸೀಲ್ದಾರ್ ನರೇಂದ್ರನಾಥ್ ಮೂಲಕ ತಹಸೀಲ್ದಾರರಿಗೆ ಹಿಂದು ಜನಜಾಗೃತಿ ಸಮಿತಿ ಮನವಿ ನೀಡಿದೆ.

ಆಗಸ್ಟ್ 15 ಮತ್ತು ಜನವರಿ 26 ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ; ಆದರೆ ಅದೇ ದಿನ, ಅದೇ ಕಾಗದದ, ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ, ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ಹಾಗಾಗಿ ಸರಕಾರದ ಅಧಿನಿಯಮಗಳನ್ನು ಧಿಕ್ಕರಿಸಿ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವ ಮಾರಾಟಗಾರರು ಹಾಗೂ ಧ್ವಜ ಸಂಹಿತೆ ಪ್ರಕಾರ ಧ್ವಜವನ್ನು ಗೌರವಿಸದ ಜನರು, ಸಂಸ್ಥೆಗಳು ಮತ್ತು ಗುಂಪುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯನ್ನು ನೀಡಲಾಯಿತು. ಈ ವೇಳೆಯಲ್ಲಿ ಮಾಧವ, ರಾಘವೇಂದ್ರ ಕಮಾಜೆ, ನಾಗೇಶ್ ಭಂಡಾರಿ, ಯದೇಶ್ ತುಂಬೆ, ಗೀತಾ ಯೋಗೇಶ್, ಸೋಮನಾಥ ಬಂಟ್ವಾಳ ಜಯಕುಮಾರ್ ಮಂಜಲಪಾಡೆ, ರಾಧಾಕೃಷ್ಣ, ಕಿರಣ್ ಮತ್ತು ಅಜಿತ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾಷ್ಟ್ರಧ್ವಜ ಅಪಮಾನ ತಡೆಗಟ್ಟಲು ಕ್ರಮ ಕೈಗೊಳ್ಳಿ: ಹಿಂದು ಜನಜಾಗೃತಿ ಸಮಿತಿ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*