ಬಂಟ್ವಾಳ

ರಾಷ್ಟ್ರಧ್ವಜ ಅಪಮಾನ ತಡೆಗಟ್ಟಲು ಕ್ರಮ ಕೈಗೊಳ್ಳಿ: ಹಿಂದು ಜನಜಾಗೃತಿ ಸಮಿತಿ ಮನವಿ

ಬಂಟ್ವಾಳ: ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ರಾಷ್ಟ್ರ ಧ್ವಜದ ಅಪಮಾನ ತಡೆಗಟ್ಟಲು  ನ್ಯಾಯಾಲಯದ ಆದೇಶದಂತೆ ಮತ್ತು ಕೇಂದ್ರ ಸರಕಾರದ ಪ್ಲಾಸ್ಟಿಕ್ ನಿಷೇಧ ನಿರ್ಧಾರದಂತೆ ಕ್ರಮ ಕೈಗೊಳ್ಳುವ ಬಗ್ಗೆ ಬಂಟ್ವಾಳದ ಉಪತಹಸೀಲ್ದಾರ್ ನರೇಂದ್ರನಾಥ್ ಮೂಲಕ ತಹಸೀಲ್ದಾರರಿಗೆ ಹಿಂದು ಜನಜಾಗೃತಿ ಸಮಿತಿ ಮನವಿ ನೀಡಿದೆ.

ಆಗಸ್ಟ್ 15 ಮತ್ತು ಜನವರಿ 26 ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ; ಆದರೆ ಅದೇ ದಿನ, ಅದೇ ಕಾಗದದ, ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ, ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ಹಾಗಾಗಿ ಸರಕಾರದ ಅಧಿನಿಯಮಗಳನ್ನು ಧಿಕ್ಕರಿಸಿ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವ ಮಾರಾಟಗಾರರು ಹಾಗೂ ಧ್ವಜ ಸಂಹಿತೆ ಪ್ರಕಾರ ಧ್ವಜವನ್ನು ಗೌರವಿಸದ ಜನರು, ಸಂಸ್ಥೆಗಳು ಮತ್ತು ಗುಂಪುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯನ್ನು ನೀಡಲಾಯಿತು. ಈ ವೇಳೆಯಲ್ಲಿ ಮಾಧವ, ರಾಘವೇಂದ್ರ ಕಮಾಜೆ, ನಾಗೇಶ್ ಭಂಡಾರಿ, ಯದೇಶ್ ತುಂಬೆ, ಗೀತಾ ಯೋಗೇಶ್, ಸೋಮನಾಥ ಬಂಟ್ವಾಳ ಜಯಕುಮಾರ್ ಮಂಜಲಪಾಡೆ, ರಾಧಾಕೃಷ್ಣ, ಕಿರಣ್ ಮತ್ತು ಅಜಿತ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

9 hours ago