ಕಲ್ಲಡ್ಕ

ಮೆಲ್ಕಾರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಅಬ್ದುಲ್ ಮಜೀದ್ ಮಾತನಾಡಿದರು.

ಬಂಟ್ವಾಳ: ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳಲು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಉಪನ್ಯಾಸಕ,ಹಿರಿಯ ನಾಟಕಕಾರ ಎಂ. ಡಿ. ಮಂಚಿ ಅಭಿಪ್ರಾಯಪಟ್ಟರು.

ಮೆಲ್ಕಾರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಭಾಷಣ ಕಲೆ, ಚುಟುಕು, ಹನಿಗವನ, ಕವನ ರಚನೆ ಮಾಡುವ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ಅಬ್ದುಲ್ ಮಜೀದ್ ಎಸ್ ವಹಿಸಿದ್ದರು. ವಿದ್ಯಾರ್ಥಿಗಳಾದ ರಮೀಝ, ಶೈಮಾ, ಸುಝನಾ, ರಂಝಿನಾ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು. ಸಹ ಯೋಜನಾಧಿಕಾರಿ ಸಂಶುನ್ನಿಸ, ಉಪನ್ಯಾಸಕರಾದ ಮೊಹಮ್ಮದ್ ಶಿಹಾಬ್, ವತ್ಸಲಾ, ಹರ್ಷ, ಗ್ರಂಥಪಾಲಕರಾದ ಸುಹೈಲ, ರಾ. ಸೇ. ಯೋ. ಘಟಕ ನಾಯಕಿಯರಾದ ಆಯಿಷಾ ನೈಫಾ, ಫಾತಿಮಾ ಜಝಿರಾ ಉಪಸ್ಥಿತರಿದ್ದರು.ನುಸೈಬ ಸ್ವಾಗತಿಸಿ, ಶೈಮಾ ವಂದಿಸಿದರು ಫಾತಿಮಾ ಅನ್ಸಿರಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts