ಕಲ್ಲಡ್ಕ

ಮೆಲ್ಕಾರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಅಬ್ದುಲ್ ಮಜೀದ್ ಮಾತನಾಡಿದರು.

ಬಂಟ್ವಾಳ: ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳಲು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಉಪನ್ಯಾಸಕ,ಹಿರಿಯ ನಾಟಕಕಾರ ಎಂ. ಡಿ. ಮಂಚಿ ಅಭಿಪ್ರಾಯಪಟ್ಟರು.

ಮೆಲ್ಕಾರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಭಾಷಣ ಕಲೆ, ಚುಟುಕು, ಹನಿಗವನ, ಕವನ ರಚನೆ ಮಾಡುವ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ಅಬ್ದುಲ್ ಮಜೀದ್ ಎಸ್ ವಹಿಸಿದ್ದರು. ವಿದ್ಯಾರ್ಥಿಗಳಾದ ರಮೀಝ, ಶೈಮಾ, ಸುಝನಾ, ರಂಝಿನಾ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು. ಸಹ ಯೋಜನಾಧಿಕಾರಿ ಸಂಶುನ್ನಿಸ, ಉಪನ್ಯಾಸಕರಾದ ಮೊಹಮ್ಮದ್ ಶಿಹಾಬ್, ವತ್ಸಲಾ, ಹರ್ಷ, ಗ್ರಂಥಪಾಲಕರಾದ ಸುಹೈಲ, ರಾ. ಸೇ. ಯೋ. ಘಟಕ ನಾಯಕಿಯರಾದ ಆಯಿಷಾ ನೈಫಾ, ಫಾತಿಮಾ ಜಝಿರಾ ಉಪಸ್ಥಿತರಿದ್ದರು.ನುಸೈಬ ಸ್ವಾಗತಿಸಿ, ಶೈಮಾ ವಂದಿಸಿದರು ಫಾತಿಮಾ ಅನ್ಸಿರಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ