ಜಿಲ್ಲಾ ಸುದ್ದಿ

ಅತ್ಯುತ್ತಮ ವೆಬ್ ಸೈಟ್ ವರದಿಗೆ ಬಿ ಜಿ ಮೋಹನ್ ದಾಸ್ ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಬಂಟ್ವಾಳ: ನಿರತ ಸಾಹಿತ್ಯ ಸಂಪದ ಮತ್ತು ಗಲ್ಫ್ ಕನ್ನಡಿಗ  – ಇವರ ಜಂಟಿ ಆಶ್ರಯದಲ್ಲಿ  ಎರಡನೇ ವರ್ಷದ ಅತ್ಯುತ್ತಮ ವೆಬ್‍ಸೈಟ್ (ಅಂತರ್ಜಾಲ) ವರದಿಗೆ ರಾಜ್ಯ ಮಟ್ಟದ ಬಿ. ಜಿ. ಮೋಹನ್‍ದಾಸ್ ಪ್ರಶಸ್ತಿ – 2022ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಯು ರೂ. 5000 ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಗೆ ಕನ್ನಡ ವೆಬ್‍ಸೈಟ್‍ನಲ್ಲಿ ಪ್ರಕಟಗೊಂಡ ವರದಿಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುವುದು. ಪತ್ರಿಕಾ ಸಂಸ್ಥೆಗಳ ವೆಬ್ ಸೈಟ್ ವರದಿಗಳನ್ನು ಪರಿಗಣಿಸಲಾಗುವುದು.

2021 ಜುಲಾಯಿ 1ರಿಂದ ಜೂನ್ 30 2022 ರ ವರೆಗೆ ಪ್ರಕಟವಾದ ಮಾನವೀಯ ಮೌಲ್ಯ, ಗ್ರಾಮೀಣ ಸಮಸ್ಯೆ, ತನಿಖಾ ಆಧಾರಿತ ವರದಿ, ಎಕ್ಸ್ ಕ್ಲೂಸಿವ್ ಸೇರಿದಂತೆ ಅತ್ಯುತ್ತಮ ವರದಿಗಳಲ್ಲಿ ಓರ್ವರನ್ನು ಆಯ್ಕೆ ಮಾಡಲಾಗುವುದು. ಒಬ್ಬ ಪತ್ರಕರ್ತರಿಗೆ ಒಂದು ವರದಿ ಕಳುಹಿಸಲು ಮಾತ್ರ ಅವಕಾಶವಿದೆ.ಆಯ್ಕೆಗೆ ವರದಿಯ ಮುದ್ರಿತ 3 ಪ್ರತಿಗಳನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಆಗಷ್ಟ್  10 ರೊಳಗೆ ಕಳುಹಿಸಿಕೊಡಬೇಕು. ಮುದ್ರಿತ ವರದಿಯ ವೆಬ್‍ಸೈಟ್ ಲಿಂಕ್ (URL Adress) ನ್ನು ಕಡ್ಡಾಯವಾಗಿ 9844619763 ಈ ನಂಬರಿಗೆ ವಾಟ್ಸಪ್ ಮಾಡಬೇಕು. ನಿರ್ಣಾಯಕರ ತೀರ್ಮಾನವೇ ಅಂತಿಮ. ಯಾವುದೇ ಚರ್ಚೆಗೆ ಆಸ್ಪದವಿಲ್ಲ.ವರದಿಯನ್ನು ಕಳುಹಿಸಬೇಕಾದ ವಿಳಾಸ :ದಿನೇಶ್ ಎನ್. ತುಂಬೆ ಕಾರ್ಯದರ್ಶಿ, ನಿರತ ಸಾಹಿತ್ಯ ಸಂಪದ,ಪ್ರಗತಿ ಪ್ರಿಂಟರ್ಸ್, ತುಂಬೆ – 574 143 ಬಂಟ್ವಾಳ ತಾಲೂಕು, ದ. ಕ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.