ಜಿಲ್ಲಾ ಸುದ್ದಿ

ಅತ್ಯುತ್ತಮ ವೆಬ್ ಸೈಟ್ ವರದಿಗೆ ಬಿ ಜಿ ಮೋಹನ್ ದಾಸ್ ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಬಂಟ್ವಾಳ: ನಿರತ ಸಾಹಿತ್ಯ ಸಂಪದ ಮತ್ತು ಗಲ್ಫ್ ಕನ್ನಡಿಗ  – ಇವರ ಜಂಟಿ ಆಶ್ರಯದಲ್ಲಿ  ಎರಡನೇ ವರ್ಷದ ಅತ್ಯುತ್ತಮ ವೆಬ್‍ಸೈಟ್ (ಅಂತರ್ಜಾಲ) ವರದಿಗೆ ರಾಜ್ಯ ಮಟ್ಟದ ಬಿ. ಜಿ. ಮೋಹನ್‍ದಾಸ್ ಪ್ರಶಸ್ತಿ – 2022ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಯು ರೂ. 5000 ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಗೆ ಕನ್ನಡ ವೆಬ್‍ಸೈಟ್‍ನಲ್ಲಿ ಪ್ರಕಟಗೊಂಡ ವರದಿಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುವುದು. ಪತ್ರಿಕಾ ಸಂಸ್ಥೆಗಳ ವೆಬ್ ಸೈಟ್ ವರದಿಗಳನ್ನು ಪರಿಗಣಿಸಲಾಗುವುದು.

2021 ಜುಲಾಯಿ 1ರಿಂದ ಜೂನ್ 30 2022 ರ ವರೆಗೆ ಪ್ರಕಟವಾದ ಮಾನವೀಯ ಮೌಲ್ಯ, ಗ್ರಾಮೀಣ ಸಮಸ್ಯೆ, ತನಿಖಾ ಆಧಾರಿತ ವರದಿ, ಎಕ್ಸ್ ಕ್ಲೂಸಿವ್ ಸೇರಿದಂತೆ ಅತ್ಯುತ್ತಮ ವರದಿಗಳಲ್ಲಿ ಓರ್ವರನ್ನು ಆಯ್ಕೆ ಮಾಡಲಾಗುವುದು. ಒಬ್ಬ ಪತ್ರಕರ್ತರಿಗೆ ಒಂದು ವರದಿ ಕಳುಹಿಸಲು ಮಾತ್ರ ಅವಕಾಶವಿದೆ.ಆಯ್ಕೆಗೆ ವರದಿಯ ಮುದ್ರಿತ 3 ಪ್ರತಿಗಳನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಆಗಷ್ಟ್  10 ರೊಳಗೆ ಕಳುಹಿಸಿಕೊಡಬೇಕು. ಮುದ್ರಿತ ವರದಿಯ ವೆಬ್‍ಸೈಟ್ ಲಿಂಕ್ (URL Adress) ನ್ನು ಕಡ್ಡಾಯವಾಗಿ 9844619763 ಈ ನಂಬರಿಗೆ ವಾಟ್ಸಪ್ ಮಾಡಬೇಕು. ನಿರ್ಣಾಯಕರ ತೀರ್ಮಾನವೇ ಅಂತಿಮ. ಯಾವುದೇ ಚರ್ಚೆಗೆ ಆಸ್ಪದವಿಲ್ಲ.ವರದಿಯನ್ನು ಕಳುಹಿಸಬೇಕಾದ ವಿಳಾಸ :ದಿನೇಶ್ ಎನ್. ತುಂಬೆ ಕಾರ್ಯದರ್ಶಿ, ನಿರತ ಸಾಹಿತ್ಯ ಸಂಪದ,ಪ್ರಗತಿ ಪ್ರಿಂಟರ್ಸ್, ತುಂಬೆ – 574 143 ಬಂಟ್ವಾಳ ತಾಲೂಕು, ದ. ಕ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ