ಆಗಸ್ಟ್ 13ರಂದು ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಅಮೃತ ಭಾರತಿಗೆ ಗಾನ ನುಡಿಯ ದೀವಿಗೆ

ಶಾಸಕ ರಾಜೇಶ್ ನಾಯ್ಕ್ ಮಾಹಿತಿ ನೀಡಿದರು.

ಬಂಟ್ವಾಳ: ಬಂಟ್ವಾಳದ ಬ್ರಹ್ಮರಕೂಟ್ಲುವಿನ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಸನಿಹದ ಬಂಟರ ಭವನದಲ್ಲಿ ಆಗಸ್ಟ್ 13ರಂದು 75ನೇ ಸ್ವಾತಂತ್ರ್ಯ ಉತ್ಸವದ ಅಮೃತಮಹೋತ್ಸವ ಆಚರಣೆಯ ಅಂಗವಾಗಿ ಅಮೃತ ಭಾರತಿಗೆ ಗಾನ ನುಡಿಯ ದೀವಿಗೆ ಎಂಬ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಆಯೋಜಿಸಲಿದ್ದಾರೆ.

ಈ ಕುರಿತು ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಅಂದು ಬೆಳಗ್ಗೆ 9.30ಕ್ಕೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಬಂಟರ ಭವನದವರೆಗೆ ಬೃಹತ್ ವಾಹನ ಜಾಥಾ, ಬೆಳಗ್ಗೆ 10.30ಕ್ಕೆ ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಯ ಕಲಿಗಳು ಎಂಬ ಕುರಿತು ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರಿಂದ ಉಪನ್ಯಾಸ, ಬಳಿಕ ಜಗದೀಶ ಆಚಾರ್ಯ ಮತ್ತು ಬಳಗದವರಿಂದ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ. ಸರ್ಕಾರಿ ಅಧಿಕಾರಿಗಳು, ವಿವಿಧ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಸಹಿತ ದೇಶಭಕ್ತ ಸಾರ್ವಜನಿಕರು ಇಲ್ಲಿ ಭಾಗವಹಿಸಲಿದ್ದು, ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಜಿಲ್ಲೆಯ ಕೊಡುಗೆಯನ್ನೂ ನೆನಪಿಸುವ ಕಾರ್ಯಕ್ರಮವಾಗಿದೆ ಎಂದರು. ಈ ಕಾರ್ಯಕ್ರಮದಲ್ಲಿ ಪಕ್ಷ, ಜಾತಿ, ಮತ ಬೇಧ ಮರೆತು ಎಲ್ಲ ಭಾರತೀಯರೂ ರಾಷ್ಟ್ರಭಕ್ತರೂ ಒಗ್ಗೂಡಿ ಪಾಲ್ಗೊಳ್ಳಬೇಕು ಎಂದು ಅವರು ವಿನಂತಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಡೊಂಬಯ ಅರಳ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಆಗಸ್ಟ್ 13ರಂದು ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಅಮೃತ ಭಾರತಿಗೆ ಗಾನ ನುಡಿಯ ದೀವಿಗೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*