ಜಿಲ್ಲಾ ಸುದ್ದಿ

ಹರ್ ಘರ್ ತಿರಂಗಾ: ಧ್ವಜಾರೋಹಣ ಕುರಿತು ಜಿಲ್ಲಾಡಳಿತ ನೀಡಿರುವ ಸೂಚನೆಗಳೇನು?

ಮಂಗಳೂರು,ಆ.11(ಕ.ವಾ):- ಅಸಂಖ್ಯಾತ ಹೋರಾಟ, ತ್ಯಾಗ, ಬಲಿದಾನಗಳ ಕಾರಣದಿಂದ ದಾಸ್ಯದ ಸಂಕೋಲೆಯಿಂದ ಬಿಡುಗಡೆಯಾದ ಭಾರತಾಂಬೆಗೆ ಪ್ರಾಪ್ತಿಯಾದ ಸ್ವಾತಂತ್ರ್ಯಕ್ಕೆ ಅಮೃತ ಮಹೋತ್ಸವದ ಸಂಭ್ರಮ.

ಈ ಹಿನ್ನಲೆಯಲ್ಲಿ ದೇಶಾದ್ಯಂತ ಭಾರತ ಸ್ವಾತಂತ್ರ್ಯದ 75ನೇ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸುವ ಸಲುವಾಗಿ ಕೇಂದ್ರ ಸರ್ಕಾರ “ಹರ್ ಘರ್ ತಿರಂಗಾ” ಎಂಬ ಘೋಷ್ಯವಾಕ್ಯದೊಂದಿಗೆ ಇದೇ ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶ ಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದಲ್ಲಿ ಸರ್ಕಾರಿ ಕಟ್ಟಡಗಳ ಹಾಗೂ ಸಾರ್ವಜನಿಕರ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸುವಂತೆ ಕೋರಲಾಗಿದೆ.

  • ಜಿಲ್ಲೆಯ ಎಲ್ಲಾ ಸರ್ಕಾರಿ ಕಟ್ಟಡಗಳು, ಶಾಲೆ, ಕಾಲೇಜು ಹಾಗೂ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯತ್ ಕಟ್ಟಡಗಳಲ್ಲಿ ರಾಷ್ಟ್ರೀಯ ಧ್ವಜದ ತ್ರಿವರ್ಣ ಧ್ವಜವನ್ನು ಹಗಲಿನಲ್ಲಿ ಮಾತ್ರ ಹಾರಿಸಲು ಅನುಮತಿಸಲಾಗಿದೆ. ಆ.13ರಿಂದ 15ರವರೆಗೆ ಪ್ರತಿದಿನ ಸೂರ್ಯೋದಯದ ನಂತರ ಬೆಳಿಗ್ಗೆ 8 ಗಂಟೆಯೊಳಗೆ ಧ್ವಜಾರೋಹಣ ಮಾಡುವುದು, ಹಾಗೆಯೇ ಸೂರ್ಯಾಸ್ತದ ವೇಳೆಗೆ ಇಳಿಸಬೇಕು.
  • ಧ್ವಜ ಸಂಹಿತೆಯ ಯಾವುದೇ ಉಲ್ಲಂಘನೆಯಾಗದಂತೆ ಮತ್ತು ರಾಷ್ಟ್ರಧ್ವಜಕ್ಕೆ ಯಾವುದೇ ಅಗೌರವ ಉಂಟಾಗದಂತೆ ಜಾಗ್ರತೆ ವಹಿಸಿ, ಈ ಕುರಿತು ಯಾವುದೇ ಮಾಧ್ಯಮಗಳಿಂದ ಅಥವಾ ಸಾರ್ವಜನಿಕರಿಂದ ಯಾವುದೇ ಆರೋಪಗಳು ಬಾರದಂತೆ ನಿಗಾವಹಿಸುವುದು ಕಚೇರಿ ಮುಖ್ಯಸ್ಥರ ಜವಾಬ್ದಾರಿಯಾಗಿದೆ, ಲೋಪದೋಷಗಳು ಆಗದಂತೆ ಎಚ್ಚರಿಕೆ ವಹಿಸಬೇಕು.
  • ಜಿಲ್ಲೆಯ ಎಲ್ಲಾ ಮನೆಗಳ ಮೇಲೆ ಆ.13 ರಂದು ಸೂರ್ಯೋದಯದ ನಂತರ ಬೆಳಿಗ್ಗೆ 8 ಗಂಟೆಯೊಳಗೆ ಧ್ವಜಾರೋಹಣ ಮಾಡಿ ಹಾಗೂ ಹಗಲು ರಾತ್ರಿ ನಿರಂತರವಾಗಿ ಧ್ವಜ ಹಾರಿಸಿ ಆ.15ರ ಸೂರ್ಯಾಸ್ತದ ವೇಳೆಗೆ ಇಳಿಸುವಂತೆ ಸೂಚಿಸಿದೆ.
  • ತ್ರಿವರ್ಣ ಧ್ವಜವನ್ನು ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸುತ್ತಾ, ಧ್ವಜವನ್ನು ಯಾವಾಗಲೂ ಪೂರ್ಣ ಗೌರವ ಮತ್ತು ಉತ್ಸಾಹದಿಂದ ಶೀಘ್ರಗತಿಯಲ್ಲಿ ಏರಿಸಿ, ನಿಧಾನವಾಗಿ ಕೆಳಕ್ಕೆ ಇಳಿಸಬೇಕು.
  • ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ಜನಗಣ ಮನವನ್ನು ಹಾಡಲೇಬೇಕು ಹಾಗೂ ರಾಷ್ಟ್ರ ಧ್ವಜವು ನೆಲ ಮುಟ್ಟದಂತೆ ಜಾಗ್ರತೆ ವಹಿಸಬೇಕು. ತ್ರಿವರ್ಣ ಧ್ವಜ ಸಂಹಿತೆಯಂತೆ ಧ್ವಜಕ್ಕೆ ಅಲಂಕಾರ ಮಾಡುವಂತಿಲ್ಲ, ಯಾವುದೇ ಲೋಪವಾಗದಂತೆ, ಅವಮಾನ ಆಗದಂತೆ ಎಚ್ಚರಿಕೆ ವಹಿಸಬೇಕು.
  • ರಾಷ್ಟ್ರ ತ್ರಿವರ್ಣ ಧ್ವಜವನ್ನು ಹಾರಿಸುವ ಮುನ್ನ ಪರಿಶೀಲಿಸಿಕೊಳ್ಳಬೇಕು, ಹರಿದ ಅಥವಾ ಕೊಳಕಾದ ತ್ರಿವರ್ಣ ಧ್ವಜವನ್ನು ಹಾರಿಸುವಂತಿಲ್ಲ. ಹಾರಿಸಿದ ನಂತರ ಹರಿದಿದ್ದರೆ ಅಂತಹ ದ್ವಜವನ್ನು ಕೂಡಲೇ ತೆಗೆಯಬೇಕು. ಹಾಗೂ ರಾಷ್ಟ್ರಧ್ವಜಕ್ಕೆ ಸಮನಾದ ಅಥವಾ ಎತ್ತರದಲ್ಲಿ ಮತ್ತೊಂದು ಧ್ವಜವನ್ನು ಹಾರಿಸಬಾರದು.
  • ಆ.13 ರಿಂದ 15ರವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಜೋಪಾನವಾಗಿ ಮನೆಯಲ್ಲಿ ಇಟ್ಟುಕೊಳ್ಳಬೇಕು.
  • ದಿ ಫ್ರೀವೆನ್ಸನ್ ಆಫ್ ಇನ್‍ಸಲ್ಟ್ಸ್ ಟು ನ್ಯಾಶನಲ್ ಹೊನರ್ ಆಕ್ಟ್ 1971 ಅಧಿನಿಯಮ 2 ರಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಅಥವಾ ಇತರೇ ಸ್ಥಳಗಳಲ್ಲಿ ರಾಷ್ಟ್ರದ್ವಜವನ್ನು ಸುಡುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ ಹಾಗೂ ಮಾತು, ಬರಹ ಅಥವಾ ಇತರ ಕೃತ್ಯದ ಮೂಲಕ ಅಗೌರವ ತೋರಿದರೆ ಮತ್ತು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಹಾಗೂ ಧ್ವಜ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸುವ ರೀತಿಯಲ್ಲಿ ಬಳಸುವುದು ಕಂಡುಬಂದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸುವ ಶಿಕ್ಷೆಗೆ ಗುರಿ ಪಡಿಸಲಾಗುವುದು. ಈ ನಿರ್ದೇಶನಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುತ್ತಾ ಹರ್ ಘರ್ ತಿರಂಗಾ ಅಭಿಯಾನವನ್ನು ಜಿಲ್ಲೆಯಾದ್ಯಂತ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago