ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎನ್ನೆಸ್ಸೆಸ್, ವಿವಿಧ ಸಂಘಗಳ ಉದ್ಘಾಟನೆ

ಬಂಟ್ವಾಳ: ಗೂಡಿನಬಳಿಯಲ್ಲಿರುವ ಬಿ.ಮೂಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಹಿತ ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳಲ್ಲಿ ದೊರೆಯುವ ವಿವಿಧ ಸಹಪಠ್ಯ ಚಟುವಟಿಕೆಗಳ ಅವಕಾಶವನ್ನು ಗರಿಷ್ಠ ಪ್ರಮಾಣದಲ್ಲಿ ಉಪಯೋಗಿಸಬೇಕು ಎಂದು ಈ ಸಂದರ್ಭ ಉದ್ಘಾಟಿಸಿದ ದ. ಕ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರೂ ಆದ ತುಂಬೆ ಪ.ಪೂ.ಕಾಲೇಜಿನ ಪ್ರಿನ್ಸಿಪಾಲ್ ಗಂಗಾಧರ ಆಳ್ವ ಕೆ.ಎನ್. ಹೇಳಿದರು.

ಪ್ರಿನ್ಸಿಪಾಲ್ ಯೂಸುಫ್ ವಿಟ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ದಿ ಸಂಘದ ಉಪಾಧ್ಯಕ್ಷೆ ರಜನಿ ಚಿಕ್ಕಯ್ಯಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಭಿತ್ತಿ ಪತ್ರಿಕೆ ಚಿಗರು ಅನ್ನು ಅನಾವರಣಗೊಳಿಸಲಾಯಿತು.   

ಜಾಹೀರಾತು

ಕಾಲೇಜಿನ ಎನ್ ಎಸ್ ಎಸ್ ಘಟಕ, ಸಾಹಿತ್ಯ ಸಂಘ, ವಾಣಿಜ್ಯ ಸಂಘ, ವಿಜ್ಞಾನ ಸಂಘ, ರೆಡ್ ರಿಬ್ಬನ್ ಕ್ಲಬ್, ರೆಡ್ ಕ್ರಾಸ್, ಇಕೊ ಕ್ಲಬ್ ಮತ್ತು ಮತದಾರರ ಸಾಕ್ಷರತಾ ಸಂಘಗಳ ಚಟುವಟಿಕೆಗಳ ಬಗ್ಗೆ ಯೋಜನಾಧಿಕಾರಿಗಳಾದ ಉಪನ್ಯಾಸಕ  ಬಾಲಕೃಷ್ಣ ನಾಯ್ಕ್.ಕೆ, ದಾಮೋದರ  ಇ.ಮತ್ತು ಅಬ್ದುಲ್ ರಝಾಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಜ್ಞಾನ ಸಂಘದ ಸಂಚಾಲಕಿ, ಜೀವಶಾಸ್ತ್ರ ಉಪನ್ಯಾಸಕಿ ಲವಿನಾ ಶಾಂತಿ ಲೋಬೋ, ರೆಡ್ ರಿಬ್ಬನ್ ಕ್ಲಬ್ ನ ನಿರ್ದೇಶಕಿ , ಗಣಿತ ಉಪನ್ಯಾಸಕಿ ಲಕ್ಷೀ ಆಚಾರ್ಯ, ಅತಿಥಿ ಉಪನ್ಯಾಸಕರಾದ ದಿವ್ಯ ವಿ.  ಹರ್ಷಿತಾ ಎಚ್. ಸ್ಫೂರ್ತಿ ಕೆ. ಸಹಕರಿಸಿದರು. ವಿದ್ಯಾರ್ಥಿನಿ ಶರಣ್ಯ ಕಾರ್ಯಕ್ರಮ ನಿರ್ವಹಿಸಿದರು. ಸಂಧ್ಯಾ ಸ್ವಾಗತಿಸಿದರು. ಎನ್.ಎಸ್.ಎಸ್.ಘಟಕದ ನಾಯಕ ಹೇಮಂತ್ ವಂದಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎನ್ನೆಸ್ಸೆಸ್, ವಿವಿಧ ಸಂಘಗಳ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*