ಪಂಜಿಕಲ್ಲಿನಲ್ಲಿ ಆಟಿಡ್ ಕೆಸರ್ಡ್ ಒಂಜಿ ದಿನ – ಸಾಂಪ್ರದಾಯಿಕ ಆಟೋಟದೊಂದಿಗೆ ಖಾದ್ಯವೈವಿಧ್ಯ, ಮಾಜಿ ಸಚಿವ ರೈ ನೇತೃತ್ವ

ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆ, ಪಿಯೂಸ್ ಎಲ್. ರೋಡ್ರಿಗಸ್ ಅಧ್ಯಕ್ಷತೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಟಿದ ಕೂಟ ಸಮಿತಿ ವತಿಯಿಂದ ಪಂಜಿಕಲ್ಲು ಬಾಲೇಶ್ವರ ಗರಡಿ ಗದ್ದೆಯಲ್ಲಿ ಭಾನುವಾರ ಆಟಿಡ್ ಕೆಸರ್ಡ್ ಒಂಜಿ ದಿನ ಎಂಬ ಕಾರ್ಯಕ್ರಮ ನಡೆಯಿತು.

ಬಾಲೇಶ್ವರ ಬಸದಿಯಲ್ಲಿ ಪೂಜೆ ಸಲ್ಲಿಸಿ, ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಟದ ಗದ್ದೆಯಲ್ಲಿ ಕಂಬಳ ಕೋಣ ಇಳಿಸುವ ಮೂಲಕ ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಚಾಲನೆಯನ್ನು ನೀಡಿದ ಮಾಜಿ ಸಚಿವ ರೈ, ಬಳಿಕ ವೇದಿಕೆಯಲ್ಲಿ ಗಣ್ಯರ ಸಮಕ್ಷಮ ಹಿಂಗಾರ ಅರಳಿಸಿದರು.

ಸಾಮಾಜಿಕ ಪರಿವರ್ತನೆ ಬಳಿಕ ಉತ್ತಮ ಜೀವನ ಸಾಗಿಸುತ್ತಿದ್ದು, ಹಿಂದಿನ ನೆನಪು ಮರೆಯಬಾರದು ಎಂಬ ಕಾರಣಕ್ಕೆ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ರಮಾನಾಥ ರೈ ಆಶಯ ನುಡಿಗಳನ್ನಾಡಿದರು.

ಜಾಹೀರಾತು

ಸಮಿತಿ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಪ್ರಾಸ್ತಾವಿಕ ಮಾತನಾಡಿ, ತುಳುನಾಡ ಒಗ್ಗಟ್ಟಿಗೆ ಮಾಜಿ ಸಚಿವ ರಮಾನಾಥ ರೈ ನೀಡಿದ ಮಾರ್ಗದರ್ಶನವನ್ನು ಸ್ಮರಿಸಿ, ಸ್ವಾತಂತ್ರ್ಯದ ಅಮೃತಮಹೋತ್ಸವ ಸಂದರ್ಭ ಇತಿಹಾಸವನ್ನು ನೆನಪಿಸುವ ಕೆಲಸ ಆಗಬೇಕು ಎಂದರು.

ಪ್ರಧಾನ ಕಾರ್ಯದರ್ಶಿ ಸುದರ್ಶನ ಜೈನ್ ಸ್ವಾಗತಿಸಿದರು. ಕೋಶಾಧಿಕಾರಿ ದೇವಪ್ಪ ಕುಲಾಲ್ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಸಂಚಾಲಕರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಡಿ.ಎಸ್. ಗಟ್ಟಿ, ಎಂ.ಎಸ್. ಮಹಮ್ಮದ್, ಮಲ್ಲಿಕಾ ಪಕ್ಕಳ, ಜಯಂತಿ ಪೂಜಾರಿ, ಅಮ್ಮು ರೈ, ಅಬ್ಬಾಸ್ ಆಲಿ ಬೋಳಂತೂರು, ರಮೇಶ್ ನಾಯಕ್ ರಾಯಿ, ಎಡ್ತೂರು ರಾಜೀವ ಶೆಟ್ಟಿ, ಪದ್ಮನಾಭ ರೈ, ಸುರೇಶ್ ಜೋರ, ಪ್ರಕಾಶ್ ಕುಮಾರ್ ಜೈನ್, ಕೃಷ್ಣರಾಜ ಜೈನ್, ಸೀತಾರಾಮ ಶೆಟ್ಟಿ ಕಾಂತಾಡಿ, ದಿನೇಶ್ ಶೆಟ್ಟಿ, ಕೇಶವ ಪೂಜಾರಿ, ಪದ್ಮರಾಜ ಬಲ್ಲಾಳ್, ಸದಾನಂದ ಶೆಟ್ಟಿ, ಸುರೇಶ್ ಶೆಟ್ಟಿ, ಮೋಹನ ಗೌಡ ಕಲ್ಮಂಜ, ಗಂಗಾಧರ ಪೂಜಾರಿ, ಲೋಲಾಕ್ಷ ಶೆಟ್ಟಿ, ವಾಸು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಆಟೋಟ, ಖಾದ್ಯ ವೈವಿಧ್ಯ: ತುಳುನಾಡ ಪರಂಪರೆಯ ಖಾದ್ಯ ವೈವಿಧ್ಯದೊಂದಿಗೆ ಪಾರಂಪರಿಕ ಆಟೋಟಗಳು ಇತ್ತು. ಸಂಗೀತಕುರ್ಚಿ, ಶೂಟಿಂಗ್ ದ ವಿಕೆಟ್, ಕೆಸರುಗದ್ದೆ ಓಟ, ಲಿಂಬೆ ಚಮಚ ಓಟ, ಪಾಡ್ದನ ಹೆಳುವ ಸ್ಪರ್ಧೆ, ಹಿಮ್ಮುಖ ಓಟ, ನೀರಿನ ಕೊಡ ಸೊಂಟದಲ್ಲಿಟ್ಟು ಓಟ, ಮಡಲು ಹೆಣೆಯುವುದು, ಮಡಿಕೆ ಹೊಡೆಯುವುದು, ಕಾರುಕಂಬ್ಳ ಓಟ, ಅಂತರ್ ಪಂಚಾಯತ್ ತಂಡಗಳ ನಡುವೆ ಹಗ್ಗ ಜಗ್ಗಾಟ, ಬಾಲ್ ಎಸೆತ, ಉರಾಳ್ ಹಾಕುವುದು, ಅಡಿಕೆ ಹಾಳೆಯಲ್ಲಿ ಎಳೆತ, ದಂಪತಿಗೆ ಕ್ರೇಝಿ ಗೇಮ್ಸ್, ತಪ್ಪಂಗಾಯಿ ಓಟ, ತೆಂಗಿನಕಾಯು ಉರುಳಿಸುವುದು ಆಟಗಳಲ್ಲಿ ಪಾಲ್ಗೊಂಡರು. ಬೆಳಗ್ಗೆ ನಾಚಿಗೆ ಮುಳ್ಳು ಕಷಾಯ, ಬೇಂಗದ ಕೆತ್ತೆ ಕಷಾಯ, ಪತ್ರೊಡೆ, ಪದೆಂಜಿ ಉಪ್ಪುಕರಿ, ಪೆಲಕಾಯಿ ಗಟ್ಟಿ, ಮಧ್ಯಾಹ್ನ ಕಣಿಲೆ ಉಪ್ಪಡ್, ಚೇವು ಸೋನೆ ಸೊಪ್ಪು ಚಟ್ನಿ, ಉಪ್ಪಡ್ ಪಚ್ಚಿಲ್ ಪಲ್ಯ, ಕುಡುತ ಸಾರ್, ಕರಿಚೇವು ಅಂಬಡೆ ಗಸಿ, ಪೂಂಬೆ ಚಟ್ನಿ, ತಜಂಕ್ ಪೆಲತರಿ ಸುಕ್ಕ, ಕಂಚಲ್ ಪೀರೆ ಪೋಡಿ, ಕಜೆ ಅರಿ ನುಪ್ಪು, ಪೆಲಕಾಯಿ ಪಾಯಸ, ಸಂಜೆ ಪೆಲಕಾಯಿ ಗಾರಿ, ಪತ್ರೊಡೆ ಉಪ್ಪುಕರಿ, ರಾಗಿ ಮಣ್ಣಿ, ಕಡುಬು ಮಂಜಲ್ ಇರೆತ ಗಟ್ಟಿ, ತಜಂಕ್ ಅಂಬಡೆ, ಈಂದ್ ಹುಡಿ ಕಷಾಯ ಇತ್ತು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಂಜಿಕಲ್ಲಿನಲ್ಲಿ ಆಟಿಡ್ ಕೆಸರ್ಡ್ ಒಂಜಿ ದಿನ – ಸಾಂಪ್ರದಾಯಿಕ ಆಟೋಟದೊಂದಿಗೆ ಖಾದ್ಯವೈವಿಧ್ಯ, ಮಾಜಿ ಸಚಿವ ರೈ ನೇತೃತ್ವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*