ಕಲ್ಲಡ್ಕ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ 3500 ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವ

ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಯಿತು. ವಿದ್ಯಾಕೇಂದ್ರದ ಕ್ರೀಡಾಂಗಣದಲ್ಲಿ 3500 ವಿದ್ಯಾರ್ಥಿಗಳಿಂದ 75ರ ಸಂಕೇತ ರಚಿಸಲಾಯಿತು. ನಿಟಿಲಾಕ್ಷ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ. ಎ. ಸುಬ್ರಹ್ಮಣ್ಯ. ಭಟ್ ಚನಿಲ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಉಮಾಶಿವ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷರಾದ ರಾಕೋಡಿ ಈಶ್ವರ ಭಟ್, ಉದ್ಯಮಿಗಳಾದ ಉಲ್ಲಾಸ್, ಅಕ್ಷಯ್ ಮೋಟಾರ್ಸ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಜೈಕಿಶನ್, ರಾಮಕೃಷ್ಣ ಕ್ರೆಡಿಟ್ ಕೊ. ಅಪರೇಟಿವ್ ಸೊಸೈಟಿಯ ಮ್ಯಾನೇಜರ್ ಚಂದ್ರಹಾಸ ಶೆಟ್ಟಿ ಪಿಲಿಂಜ, ಹಿರಿಯರಾದ ಡಾ. ಕಮಲ ಪ್ರ.ಭಟ್, ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ್ ಎನ್, ಆಡಳಿತ ಮಂಡಳಿ ಸದಸ್ಯರು, ಅಭಿವೃದ್ದಿ ಸಮಿತಿ ಸದಸ್ಯರು, ವಿಭಾಗ ಪ್ರಮುಖರು, ಪೋಷಕರು, ಬೋಧಕರು, ಬೊಧಕೇತರರು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ವಿವಿಧ ವಿಭಾಗಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.