ಹಿರಿಯ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ, ಆಗಸ್ಟ್ 27ರಂದು ಮಂಗಳೂರು ಪುರಭವನದಲ್ಲಿ ಪ್ರದಾನ

ಮಂಗಳೂರು: ವಾಟ್ಸಾಪ್ ಬಳಗವಾಗಿ ಆರಂಭಗೊಂಡ ಭ್ರಾಮರಿ ಯಕ್ಷಮಿತ್ರರು ಬಳಗ ಇದೀಗ ಯಶಸ್ವಿ ಯಕ್ಷಗಾನ ಪ್ರದರ್ಶನಗಳನ್ನು ಆಯೋಜಿಸುತ್ತಿದ್ದು, ಈ ವರ್ಷವೂ ಮಂಗಳೂರು ಪುರಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.

 ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಗಸ್ಟ್ 27ರಂದು ಶನಿವಾರ ಸಂಜೆ 7 ಗಂಟೆಯಿಂದ ಮರುದಿನ ಬೆಳಗ್ಗೆವರೆಗೆ ನಡೆಯುವ ಯಕ್ಷಗಾನ ಕಾರ್ಯಕ್ರಮದ ಆರಂಭದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ ಅವರಿಗೆ ಭ್ರಾಮರಿ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದು ಐದನೇ ವರ್ಷದ ಕಾರ್ಯಕ್ರಮವಾಗಿದೆ.

ಯಕ್ಷಗಾನದ ಹಿರಿಯ ಹಾಸ್ಯಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ ,ನೇಪಥ್ಯ ಕಲಾವಿದರಾದ ಗೋಪಾಲ ಪೂಜಾರಿ ಹಾಗೂ ಬೊಕ್ಕಸ ಜಗನ್ನಾಥ ರಾವ್ ಅವರಿಗೆ ಭ್ರಾಮರೀ ಯಕ್ಷಸೇವಾ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಜಾಹೀರಾತು

ಹಿರಿಯ ಯಕ್ಷಗಾನ ಪ್ರಸಂಗಕರ್ತ ಪೊಳಲಿ ನಿತ್ಯಾನಂದ ಕಾರಂತ ಅಧ್ಯಕ್ಷತೆ ವಹಿಸಲಿದ್ದು,ಮಂಗಳೂರು ಉತ್ತರದ ಶಾಸಕ ಡಾ|ವೈ.ಭರತ್ ಶೆಟ್ಟಿ, ಮನಾಪ ಮೇಯರ್ ಪ್ರೇಮಾನಂದ ಶೆಟ್ಟಿ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್, ಧಾರ್ಮಿಕ ಪರಿಷತ್ ಸದಸ್ಯ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ,ಮಂಗಳೂರು ಗಣೇಶೋತ್ಸವದ ಅಧ್ಯಕ್ಷ ಶಶಿಕಾಂತ್ ನಾಗ್ವೇಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದಿವಂಗತ ಬಲಿಪ ಪ್ರಸಾದ ಭಟ್ ಅವರ ಸಂಸ್ಮರಣೆ,ಯಕ್ಷಗಾನ ಪೂರ್ವರಂಗ,ಚೆಂಡೆ ಜುಗಲ್ ಬಂಧಿ, ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ದಮಯಂತಿ ಪುನಃ ಸ್ವಯಂವರ, ಮಾಯಾತಿಲೋತ್ತಮೆ,ವೀರವರ್ಮ ಕಾಳಗ ಯಕ್ಷಗಾನದ ಪ್ರದರ್ಶನ ಜರಗಲಿದೆ.ಈ ಎಲ್ಲಾ ಕಾರ್ಯಕ್ರಮ ಗಳಿಗೂ ಉಚಿತ ಪ್ರವೇಶ ಇರುತ್ತದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಿರಿಯ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ, ಆಗಸ್ಟ್ 27ರಂದು ಮಂಗಳೂರು ಪುರಭವನದಲ್ಲಿ ಪ್ರದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*