ಕಲ್ಲಡ್ಕ

ಕಲ್ಲಡ್ಕದಲ್ಲಿ ಅದ್ದೂರಿಯ 90ನೇ ವರ್ಷದ ಮೊಸರು ಕುಡಿಕೆ ಉತ್ಸವ

ವೈಭವದ ಶೋಭಾಯಾತ್ರೆ

ಕಲ್ಲಡ್ಕ ರಾಮನಗರದ ಶ್ರೀರಾಮ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಹಿನ್ನೆಲೆಯಲ್ಲಿ ಅದ್ಧೂರಿಯ ಮೊಸರು ಕುಡಿಕೆ ಉತ್ಸವದ 90ನೇ ವರ್ಷದ ಕಾರ್ಯಕ್ರಮ ಕಲ್ಲಡ್ಕದಲ್ಲಿ ಶುಕ್ರವಾರ ಸಂಜೆ ವಿಜೃಂಭಣೆಯಿಂದ ವೈಭವದ ಮೆರವಣಿಗೆಯೊಂದಿಗೆ ನಡೆಯಿತು.

ಗುರುವಾರ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಶ್ರೀಕೃಷ್ಣ ದೇವರ ಭವ್ಯ ಶೋಭಾಯಾತ್ರೆ ನೆರವೇರಿತು.

ಜಾಹೀರಾತು

ಶ್ರೀ ರಾಮಾಂಜನೇಯ ವಿಶ್ವಸ್ಥ ಮಂಡಳಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಕಲ್ಲಡ್ಕ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಆರ್.ಚೆನ್ನಪ್ಪ ಕೋಟ್ಯಾನ್, ಸುಲೋಚನಾ ಜಿ.ಕೆ. ಭಟ್, ಕ.ಕೃಷ್ಣಪ್ಪ, ಸುಜಿತ್ ಕೊಟ್ಟಾರಿ, ನಾಗೇಶ್ ಕಲ್ಲಡ್ಕ, ಬಿ.ನಾರಾಯಣ ಸೋಮಯಾಜಿ, ವಸಂತ ಮಾಧವ, ಯತಿನ್ ಕುಮಾರ್, ಪುಷ್ಪರಾಜ್ ಶೆಟ್ಟಿಗಾರ್, ಉತ್ತಮ್ ಕುಮಾರ್ ಪಳನೀರು, ಹರೀಶ್ ಆಚಾರ್ಯ, ದಿನೇಶ್ ಅಮ್ಟೂರು, ಬೊಂಡಾಲ ಜನಾರ್ದನ ಕುಲಾಲ್, ಚಿತ್ತರಂಜನ್ ಹೊಸಕಟ್ಟ, ಮೋನಪ್ಪ ದೇವಸ್ಯ, ವಜ್ರನಾಥ ಕಲ್ಲಡ್ಕ ಸಹಿತ ಸಾರ್ವಜನಿಕರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಮೊಸರು ಕುಡಿಕೆ ಒಡೆಯುವುದು, ವಿವಿಧ ಟ್ಯಾಬ್ಲೊಗಳು ಗಮನ ಸೆಳೆದವು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ