ಬಂಟ್ವಾಳ

ಬಂಟ್ವಾಳ ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಶುಕ್ರವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ ನಡೆಯಿತು.

ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಶ್ರೀಕೃಷ್ಣನ ಜೀವನವು ನಮಗೆ ಪ್ರತೀ ಹಂತದಲ್ಲೂ ಮಾರ್ಗದರ್ಶನ ಮಾಡುತ್ತದೆ ಎಂದು ಹೇಳಿದರು.

ಇದೇ ಸಂದರ್ಭ ಉಪತಹಸೀಲ್ದಾರ್ ನವೀನ್ ಬೆಂಜನಪದವು ಮಾತನಾಡಿ ಭಗವದ್ಗೀತೆ ಎಲ್ಲಾ ಸಂದರ್ಭಗಳಲ್ಲೂ ಅಳವಡಿಸಿಕೊಳ್ಳಬಹುದಾದ, ಜಗತ್ತಿನ ಎಲ್ಲರೂ ಸ್ವೀಕರಿಸಿರುವ ಮತ್ತು ಗೌರವಿಸುವ ಪವಿತ್ರ ಗ್ರಂಥ. ನೈಜ ತತ್ವಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಜಾಹೀರಾತು

ಈ ಸಂದರ್ಭದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಶುಭ ಹಾರೈಸಿದರು. ಉಪತಹಸೀಲ್ದಾರ್ ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕರಾದ ವಿಜಯ್ ಆರ್ ಸಂತೋಷ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್  ಹಾಗೂ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ