ಕಲ್ಲಡ್ಕ

ಗೋಳ್ತಮಜಲಿನಲ್ಲಿ ತಹಸೀಲ್ದಾರ್ ಗ್ರಾಮವಾಸ್ತವ್ಯ: ಹಲವು ಸಮಸ್ಯೆಗಳ ಅಹವಾಲು ಮಂಡಿಸಿದ ಸಾರ್ವಜನಿಕರು

ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು ಅವರ ಗ್ರಾಮವಾಸ್ತವ್ಯ ಕಾರ್ಯಕ್ರಮ ಶನಿವಾರ ಗೋಳ್ತಮಜಲು ಗ್ರಾಮದಲ್ಲಿ ನಡೆಯಿತು.

ಕಲ್ಲಡ್ಕ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಕಂದಾಯ ಸಹಿತ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿ, ಅಹವಾಲುಗಳನ್ನು ಸ್ಥಳೀಯ ಗ್ರಾಮಸ್ಥರು ಸಲ್ಲಿಸಿದರು. ಕೆಲವು ಕೆಲಸ ಕಾರ್ಯಗಳು ಅರ್ಜಿ ನೀಡಿ ಸಾಕಷ್ಟು ದಿನಗಳು ಕಳೆದಿದ್ದರೂ ಆಗಿರದ ವಿಚಾರದ ಕುರಿತು ಸಾರ್ವಜನಿಕರು ಗಮನ ಸೆಳೆದರು. ರೇಷನ್ ಕಾರ್ಡ್ ಸಮಸ್ಯೆ, ಫಲಾನುಭವಿಗಳಿಗೆ ಅದರ ಲಾಭಗಳು ಸಿಗದೇ ಇರುವುದು, ಜಾಗದ ಸಮಸ್ಯೆ ಸಹಿತ ಸ್ಥಳೀಯ ಹಲವು ಸಮಸ್ಯೆಗಳ ಕುರಿತು ಸಾರ್ವಜನಿಕರು ಗಮನ ಸೆಳೆದರು.

ಗ್ರಾಪಂ ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಉಪಾಧ್ಯಕ್ಷೆ ಲಕ್ಷ್ಮೀ ಪ್ರಭು, ಸ್ಥಳೀಯ ಪ್ರಮುಖರಾದ  ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಪ್ರಮುಖರಾದ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು, ಉಪತಹಸೀಲ್ದಾರ್ ನವೀನ್ ಬೆಂಜನಪದವು, ದಿವಾಕರ ಮುಗಳಿಯ, ಗ್ರೆಟ್ಟಾ ಮಸ್ಕರೇನ್ಹಸ್, ಪಿಡಿಒ ವಿಜಯ ಶಂಕರ್ ಆಳ್ವ, ಕಂದಾಯ ನಿರೀಕ್ಷಕ ವಿಜಯ್.ಆರ್, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಪ್ರಶಾಂತ್, ಆಥಿಕ್, ಯಶ್ವಿತ, ಸ್ವಾತಿ, ವಿಜೇತ, ಅಶ್ವಿನಿ ಸಿಬ್ಬಂದಿ ವೆಂಕಟರಮಣ, ಮೋಹನ್ ದಾಸ್, ಸದಾಶಿವ ಕೈಕಂಬ, ಶಿವಪ್ರಸಾದ್ ಹಾಜರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts