ಜಿಲ್ಲಾ ಸುದ್ದಿ

ದ.ಕ. ಜಿಲ್ಲೆಯ ಪೊಲೀಸರ ಟೀಮ್ ವರ್ಕ್ ಗೆ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಿಂದ ಶ್ಲಾಘನೆ

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರನ್ನು ದ.ಕ.ಜಿಲ್ಲಾ ಪೊಲೀಸ್ ಘಟಕದಲ್ಲಿ ಸೋಮವಾರ ಅಭಿನಂದಿಸಲಾಯಿತು.

ಯಾವುದೇ ರೀತಿಯ ಸುಳಿವು ಇಲ್ಲದೇ ಇದ್ದ ಸೂಕ್ಷ್ಮ ಪ್ರಕರಣವನ್ನು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ ಅಧಿಕಾರಿ, ಸಿಬ್ಬಂದಿಗಳನ್ನು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ದೇ ನೇತೃತ್ವದಲ್ಲಿ ಅಭಿನಂದಿಸಿ ಬಹುಮಾನ ನೀಡಿ ಪುರಸ್ಕರಿಸಲಾಯಿತು. ಈ ಸಂದರ್ಭ ಮಾತನಾಡಿದ ಅವರು, ಇದು ಯಾವುದೇ ಓರ್ವ ಅಧಿಕಾರಿ, ಸಿಬ್ಬಂದಿಯ ವೈಯಕ್ತಿಕ ಕೆಲಸವಾಗಿರದೆ ಎಲ್ಲ 82 ಮಂದಿಯ ಸತತ ಪರಿಶ್ರಮದ ಫಲ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭ ಎಸ್ಪಿ ಋಷಿಕೇಶ್ ಸೋನಾವಣೆ ಮತ್ತಿತರರು ಉಪಸ್ಥಿತರಿದ್ದರು.

ಆಪಾದಿತರನ್ನು ಪತ್ತೆಹಚ್ಚಲು ಬೆಳ್ಳಾರೆ, ಸುಳ್ಯ, ಸುಬ್ರಹ್ಮಣ್ಯ, ಕಡಬ, ವಿಟ್ಲ, ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳ ಸೇರಿ ದ.ಕ. ಜಿಲ್ಲೆ, ಪಶ್ಚಿಮ ವಲಯ ಅಧಿಕಾರಿಗಳ ಸಿಬ್ಬಂದಿ ತನಿಖಾ ತಂಡ ರಚಿಸಿ, ರಾಜ್ಯ, ಹೊರರಾಜ್ಯದ ವಿವಿಧೆಡೆ ಪತ್ತೆಗೆ ಪ್ರಯತ್ನಿಸಲಾಗಿತ್ತು. ಒಟ್ಟು 82 ಮಂದಿ ಅಧಿಕಾರಿ ಸಿಬ್ಬಂದಿಯತನಿಖಾ ತಂಡ ಇದರಲ್ಲಿ ಪಾಲ್ಗೊಂಡಿತ್ತು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ