ಬಂಟ್ವಾಳ

ಅಭಿವೃದ್ಧಿ ಪಥದತ್ತ ಬಂಟ್ವಾಳ – ಪೊಳಲಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ರಸ್ತೆ ಕಾಮಗಾರಿ ಉದ್ಘಾಟಿಸಿ ಸಂಸದ ನಳಿನ್ ಕುಮಾರ್

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಪ್ರಯತ್ನದ ಅನುದಾನದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 28.5 ಕೋಟಿ ರೂ ಮೊತ್ತದ 56 ಗ್ರಾಮಗಳ 231 ಕಾಮಗಾರಿ ಮತ್ತು ಲೋಕೋಪಯೋಗಿ ಇಲಾಖೆಯ 73.75 ಕೋಟಿ ರೂ ಮೊತ್ತದ 22 ಕಾಮಗಾರಿಗಳು ಸೇರಿ ಒಟ್ಟು 102.5 ಕೋಟಿ ರೂ ಮೊತ್ತದ 253 ಕಾಮಗಾರಿಗಳ ಶಿಲಾನ್ಯಾಸ ಮತ್ತು ಕಾರ್ಯಾರಂಭ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಬೆಳಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ ಪೂಜೆ ಬಳಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಪೊಳಲಿಯಲ್ಲಿ ಉದ್ಘಾಟನೆ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ರಾಜೇಶ್ ನಾಯ್ಕ್ ಅವರು ಸದ್ದಿಲ್ಲದೆ ಕ್ಷೇತ್ರದ ಅಭಿವೃದ್ಧಿ ನಡೆಸುತ್ತಿದ್ದು, ನಾಲ್ಕೂವರೆ ವರ್ಷಗಳಲ್ಲಿ ಬಂಟ್ವಾಳ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ನೆಮ್ಮದಿಯೊಂದಿಗೆ ಕ್ಷೇತ್ರ ಬೆಳವಣಿಗೆ ಕಾಣುತ್ತಿದೆ ಎಂದರು.

40 ಲಕ್ಷ ರೂ ವೆಚ್ಚದಲ್ಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಹಿಂಬದಿ ಚರಂಡಿ ನಿರ್ಮಾಣ, 10 ಲಕ್ಷ ರೂ ವೆಚ್ಚದಲ್ಲಿ ಶ್ರೀ ಪೊಳಲಿ ರಾಮಕೃಷ್ಣ ತಪೋವನ ರಸ್ತೆ , 28 ಕೋಟಿ ರೂ ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಬಂಟ್ವಾಳ ಕ್ಷೇತ್ರದ 56 ಗ್ರಾಮಗಳ 231 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೊಳಲಿಯಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, , ಸಾರ್ವಜನಿಕರು ಕಾಮಗಾರಿ ಗುಣಮಟ್ಟವನ್ನು ಪರಿಶೀಲನೆ ಮಾಡುವುದರ ಮೂಲಕ ಯೋಜನೆ ಅನುಷ್ಠಾನಕ್ಕೆ ಸಹಕರಿಸಬೇಕು ಎಂದರು.

ಜಾಹೀರಾತು

ಮಾಜಿ ಶಾಸಕ ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುಲೋಚನಾ ಜಿಕೆ.ಭಟ್, ರವೀಂದ್ರ ಕಂಬಳಿ, ಕಮಲಾಕ್ಷಿ ಕೆ.ಪೂಜಾರಿ, ತುಂಗಪ್ಪ ಬಂಗೇರ, ಡೊಂಬಯ್ಯ ಅರಳ, ರವೀಶ್ ಶೆಟ್ಟಿ, ಗಣೇಶ್ ಸುವರ್ಣ, ಚಂದ್ರಾವತಿ, ಪೊಳಲಿ ವೆಂಕಟೇಶ್ ನಾವುಡ, ಯಶವಂತ ಪೂಜಾರಿ, ರಾಮದಾಸ ಬಂಟ್ವಾಳ, ಸುದರ್ಶನ ಬಜ, ಸೋಮಪ್ಪ ಕೋಟ್ಯಾನ್, ಪ್ರಭಾಕರ ಪ್ರಭು, ರತ್ನ ಕುಮಾರ್ ಚೌಟ, ಪುರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ್ ರೈ ಮಾಣಿ, ಪ್ರಕಾಶ್ ಅಂಚನ್, ರಮನಾಥ ರಾಯಿ, ಅಭಿಷೇಕ್ ರೈ, ಯಶವಂತ ನಗ್ರಿ, ಮೋನಪ್ಪ ದೇವಸ್ಯ, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಯಶೋಧರ ಕರ್ಬೆಟ್ಟು, ವಜ್ರನಾಥ ಕಲ್ಲಡ್ಕ ಸುರೇಶ್ ಕೋಟ್ಯಾನ್, ಮಾಧವ ಮಾವೆ, ನಂದರಾಮ ರೈ, ಪುಷ್ಪರಾಜ್ ಚೌಟ, ಉದಯಕುಮಾರ್ ರಾವ್, ಚರಣ್ ಜುಮಾದಿಗುಡ್ಡೆ, ಅಭಿಷೇಕ್ ಶೆಟ್ಟಿ, ಸಚಿನ್ ಅಡಪ, ದಿನೇಶ್ ಅಮ್ಟೂರು, ಯಶೋಧರ ಚೌಟ, ಸುಕೇಶ್ ಚೌಟ, ಕಿಶೋರ್ ಪಲ್ಲಿಪಾಡಿ, ಬಾಲಕೃಷ್ಣ ಸೆರ್ಕಳ, ಸಾಂತಪ್ಪ ಪೂಜಾರಿ, ಶರ್ಮಿತ್ ಜೈನ್, ಕಾರ್ತಿಕ್ ಬಳ್ಳಾಲ್, ಪ್ರೇಮನಾಥ ಶೆಟ್ಟಿ, ಕಿಶೋರ್ ಶೆಟ್ಟಿ, ಮಾಧವ ಕರ್ಬೆಟ್ಟು, ಧನಂಜಯ ಶೆಟ್ಟಿ, ಯಶವಂತ ನಾಯ್ಕ್, ಸುಪ್ರೀತ್ ಆಳ್ವ, ಗಿರಿಪ್ರಕಾಶ್ ತಂತ್ರಿ, ಲೋಕೇಶ್ ಭರಣೆ, ಚಂದ್ರಾವತಿ ದೇವಾಡಿಗ, ದೇವಳದ ಅರ್ಚಕರಾದ ಮಾಧವ ಭಟ್ , ನಾರಾಯಣ ಭಟ್, ಪರಮೇಶ್ವರ ಭಟ್, ಕೆ. ರಾಮ್ ಭಟ್, ರಾಧಕೃಷ್ಣ ತಂತ್ರಿ ಪೊಳಲಿ, ಕಾರ್ತಿಕ್ ಬಳ್ಳಾಲ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ತಾರಾನಾಥ ಸಾಲ್ಯಾನ್, ಲೋಕೋಪಯೋಗಿ ಎಇಇ ಜಯಪ್ರಕಾಶ್, ಗುತ್ತಿಗೆದಾರರಾದ ಎ.ಎಚ್.ಖಾದರ್, ಧೀರಜ್ ನಾಯ್ಕ್ ಮತ್ತಿತರರು ಇದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts