ಬಂಟ್ವಾಳ

ಪ್ರಧಾನಿ ಮೋದಿ ಕಾರ್ಯಕ್ರಮ: ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಸೆಪ್ಟೆಂಬರ್ 2ರಂದು ಆಗಮಿಸುವ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪೂರ್ವತಯಾರಿಯಾಗಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು.

ಶಾಸಕರಾದ ರಾಜೇಶ್ ನಾಯ್ಕ್  ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡಬಿದ್ರಿ ಉಪಸ್ಥಿತಿಯಲ್ಲಿ  ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ  ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ  ನಡೆದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಾಯಕರು ಕರೆ ನೀಡಿದರು. ಬಂಟ್ವಾಳದಿಂದ ಸುಮಾರು 25000 ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದಾರೆ ಎಂದು ಶಾಸಕರಾದ ರಾಜೇಶ್ ನಾಯ್ಕ್  ತಿಳಿಸಿದರು.

ಸಭೆಯಲ್ಲಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ , ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ  ಡೊಂಬಯ ಅರಳ,  ರವೀಶ್ ಶೆಟ್ಟಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ , ಪದ್ಮನಾಭ ಕೊಟ್ಟಾರಿ,  ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಬೂಡ ಅಧ್ಯಕ್ಷರಾದ  ದೇವದಾಸ ಶೆಟ್ಟಿ, ಸುಲೋಚನ ಭಟ್ ಮತ್ತು ಕ್ಷೇತ್ರ  ಪದಾಧಿಕಾರಿಗಳು ಪಕ್ಷದ ಜಿಲ್ಲಾ  ಮಂಡಲದ  ವಿವಿಧ ಮೋರ್ಚಾಗಳ ಪದಾಧಿಕಾರಿಗಳು ವಿವಿಧ ಪ್ರಕೋಷ್ಟ ಪ್ರಮುಖರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು .

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ