27ರಿಂದ 29ರವರೆಗೆ ಬಂಟ್ವಾಳದಲ್ಲಿ ಸಿಪಿಐನ ದ.ಕ.ಉಡುಪಿ ಜಿಲ್ಲಾ 24ನೇ ಸಮ್ಮೇಳನ

ಬಂಟ್ವಾಳ: ಆಗಸ್ಟ್ 27ರಿಂದ 29ರವರೆಗೆ ಬಂಟ್ವಾಳದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ದ.ಕ. ಮತ್ತು ಉಡುಪಿ ಜಿಲ್ಲೆಯ 24ನೇ ಸಮ್ಮೇಳನ ನಡೆಯಲಿದೆ ಎಂದು ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ಹೇಳಿದರು.

ಈ ಕುರಿತು ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 29ರಂದು ಬಿ.ಸಿ.ರೋಡ್ ಕೈಕಂಬದ ಬಳಿಯಲ್ಲಿ ಸಾರ್ವಜನಿಕರು ಒಟ್ಟು ಸೇರಿ ಬಿ.ಸಿ.ರೋಡ್ ವೃತ್ತ ಬಳಿಯ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣಕ್ಕೆ ವರ್ಣರಂಜಿತ ರ್ಯಾಲಿ ನಡೆಸಲಿದ್ದಾರೆ. ಬಿ.ವಿಶ್ವನಾಥ ನಾಯ್ಕ್ ನಗರದ ಎಸ್.ಚಂದಪ್ಪ ಅಂಚನ್ ಸಭಾಂಗಣದ ಪಿ.ಸಂಜೀವ ವೇದಿಕೆಯಲ್ಲಿ ಬೆಳಗ್ಗೆ 11ರಿಂದ ನಡೆಯುವ ಬಹಿರಂಗ ಸಭೆಯನ್ನು ಸಿಪಿಐ ಕಣ್ಣೂರು ಜಿಲ್ಲಾ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಸಂದೋಷ್ ಕುಮಾರ್ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ರಾಷ್ಟ್ರೀಯ ಮಂಡಳಿ ಮಾಜಿ ಸದಸ್ಯ ಡಾ. ಸಿದ್ಧನಗೌಡ ಪಾಟೀಲ ಭಾಗವಹಿಸುವರು.

ಪ್ರಮುಖರಾದ ಸಿದ್ಧತಾ ಸಮಿತಿ ಅಧ್ಯಕ್ಷ ಡಾ. ಬಿ.ಶ್ರೀನಿವಾಸ ಕಕ್ಕಿಲ್ಲಾಯ, ಸಂಚಾಲಕ ಬಾಬು ಭಂಡಾರಿ ಮತ್ತಿತರರು ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ದ.ಕ., ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ವಹಿಸುವರು ಎಂದರು. ಆ.27 ಮತ್ತು 28ರಂದು ಪ್ರತಿನಿಧಿ ಸಮ್ಮೇಳನ ಬಂಟ್ವಾಳದ ಕಾಮ್ರೆಡ್ ಎ.ಶಾಂತಾರಾಮ ಪೈ ಸ್ಮಾರಕ ಭವನದಲ್ಲಿ ನಡೆಯಲಿದೆ ಎಂದರು.

ಜಾಹೀರಾತು

ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಆ.28ರ ಭಾನುವಾರ ಸಂಜೆ 4 ಗಂಟೆಗೆ ಬಂಟ್ವಾಳ ಬೈಪಾಸ್ ನಲ್ಲಿರುವ ಪಕ್ಷದ ಕಚೇರಿಯಿಂದ ಬೈಕ್ ರ್ಯಾಲಿ ನಡೆಯಲಿದ್ದು, ಪಾಣೆಮಂಗಳೂರು ಮೂಲಕ ಗೂಡಿನಬಳಿಯಿಂದ ಬಿ.ಸಿ.ರೋಡ್ ವೃತ್ತದಿಂದ ಬಿ.ಸಿ.ರೋಡ್ ಪೇಟೆ ಮೂಲಕ ಕೈಕಂಬ ಜಂಕ್ಷನ್ ಪೊಳಲಿ ದ್ವಾರದವರೆಗೆ ಬಂದು ಸಮಾಪ್ತಿಗೊಳ್ಳಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಿಪಿಐ ದ.ಕ., ಉಡುಪಿ ಜಿಲ್ಲಾ ಸಹಕಾರ್ಯದರ್ಶಿ ಬಿ.ಶೇಖರ್, ವಿ.ಎಸ್.ಬೇರಿಂಜ, ಎಂ.ಕರುಣಾಕರ್, ಕಾರ್ಯಕಾರಿ ಸಮಿತಿ ಸದಸ್ಯ ಸುರೇಶ್ ಕುಮಾರ್ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "27ರಿಂದ 29ರವರೆಗೆ ಬಂಟ್ವಾಳದಲ್ಲಿ ಸಿಪಿಐನ ದ.ಕ.ಉಡುಪಿ ಜಿಲ್ಲಾ 24ನೇ ಸಮ್ಮೇಳನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*