ಬಂಟ್ವಾಳ: 2023ರ ಫೆಬ್ರವರಿಯಲ್ಲಿ ಬ್ರಹ್ಮಕಲಶೋತ್ಸವ ಜರಗಲಿರುವ ಇತಿಹಾಸ ಪ್ರಸಿದ್ಧ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ದೇವಸ್ಥಾನಕ್ಕೆ ಸಮಸ್ತ ದೇವಾಡಿಗ ಸಮಾಜ ಹಾಗೂ ಆಸ್ತಿಕ ಬಂಧುಗಳ ಸಹಕಾರದಿಂದ ಅರ್ಪಿಸಲ್ಪಡುವ ನೂತನ ರಥ ಸಮರ್ಪಣಾ ಸಮಿತಿಗೆ ಸಾಮಾಜಿಕ ನೇತಾರ, ಪ್ರಸ್ತುತ ಬಿಜೆಪಿ ದ.ಕ. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಅಧ್ಯಕ್ಷರಾಗಿ ಆಯ್ಕೆಗೊಂಡರು.
ಇತ್ತೀಚೆಗೆ ಬಿ.ಸಿ.ರೋಡಿನಲ್ಲಿ ನಡೆದ ದೇವಾಡಿಗ ಸಮಾಜದ ಸಮಾಲೋಚನಾ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಕಳೆದ 2020ರಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ದೇವಾಡಿಗ ಸಮಾಜದವರು ಸಮರ್ಪಿಸಿದ ನೂತನ ಷಷ್ಠಿರಥ ಸಮರ್ಪಣಾ ಸಮಿತಿಯ ಅಧ್ಯಕ್ಷರಾಗಿಯೂ ಯಶಸ್ವಿಯಾಗಿ ಸೇವೆ ಸಲ್ಲಿಸಿರುತ್ತಾರೆ. ನೂತನ ಶ್ರೀ ನಂದಾವರ ರಥ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸದಾಶಿವ ಮೊಯ್ಲಿ ಬೆಂಜನಪದವು, ಕೋಶಾಧಿಕಾರಿಯಾಗಿ ಪ್ರವೀಣ್ ದೇವಾಡಿಗ ನೆಟ್ಲ, ಗೌರವಾಧ್ಯಕ್ಷರಾಗಿ ಡಾ| ಸುಂದರ ಮೊಯ್ಲಿ, ಗೌರವ ಸಲಹೆಗಾರರಾದ ಪದ್ಮನಾಭ ದೇವಾಡಿಗ ಹಾಗೂ ಉಪಾಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು ಮತ್ತು ಸದಸ್ಯರ ಸಮಿತಿಗಳನ್ನು ರಚಿಸಲಾಯಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…