ಬಂಟ್ವಾಳ

ದೇವಾಡಿಗ ಸಮಾಜದ ಶ್ರೀ ನಂದಾವರ ದೇವಸ್ಥಾನ ರಥ ಸಮರ್ಪಣಾ ಸಮಿತಿ ಅಧ್ಯಕ್ಷರಾಗಿ ರಾಮದಾಸ್ ಬಂಟ್ವಾಳ ಆಯ್ಕೆ

ಬಂಟ್ವಾಳ: 2023ರ ಫೆಬ್ರವರಿಯಲ್ಲಿ ಬ್ರಹ್ಮಕಲಶೋತ್ಸವ ಜರಗಲಿರುವ ಇತಿಹಾಸ ಪ್ರಸಿದ್ಧ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ದೇವಸ್ಥಾನಕ್ಕೆ ಸಮಸ್ತ ದೇವಾಡಿಗ ಸಮಾಜ ಹಾಗೂ ಆಸ್ತಿಕ ಬಂಧುಗಳ ಸಹಕಾರದಿಂದ ಅರ್ಪಿಸಲ್ಪಡುವ ನೂತನ ರಥ ಸಮರ್ಪಣಾ ಸಮಿತಿಗೆ ಸಾಮಾಜಿಕ ನೇತಾರ, ಪ್ರಸ್ತುತ ಬಿಜೆಪಿ ದ.ಕ. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಅಧ್ಯಕ್ಷರಾಗಿ ಆಯ್ಕೆಗೊಂಡರು.

ಇತ್ತೀಚೆಗೆ ಬಿ.ಸಿ.ರೋಡಿನಲ್ಲಿ ನಡೆದ ದೇವಾಡಿಗ ಸಮಾಜದ ಸಮಾಲೋಚನಾ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಕಳೆದ 2020ರಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ದೇವಾಡಿಗ ಸಮಾಜದವರು ಸಮರ್ಪಿಸಿದ ನೂತನ ಷಷ್ಠಿರಥ ಸಮರ್ಪಣಾ ಸಮಿತಿಯ ಅಧ್ಯಕ್ಷರಾಗಿಯೂ ಯಶಸ್ವಿಯಾಗಿ ಸೇವೆ ಸಲ್ಲಿಸಿರುತ್ತಾರೆ. ನೂತನ ಶ್ರೀ ನಂದಾವರ ರಥ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸದಾಶಿವ ಮೊಯ್ಲಿ ಬೆಂಜನಪದವು, ಕೋಶಾಧಿಕಾರಿಯಾಗಿ ಪ್ರವೀಣ್ ದೇವಾಡಿಗ ನೆಟ್ಲ, ಗೌರವಾಧ್ಯಕ್ಷರಾಗಿ ಡಾ| ಸುಂದರ ಮೊಯ್ಲಿ, ಗೌರವ ಸಲಹೆಗಾರರಾದ ಪದ್ಮನಾಭ ದೇವಾಡಿಗ ಹಾಗೂ ಉಪಾಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು ಮತ್ತು ಸದಸ್ಯರ ಸಮಿತಿಗಳನ್ನು ರಚಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ