ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯಕರ್ತರ ಸಭೆ: ಬಂಟ್ವಾಳದಲ್ಲಿ ಸ್ಪರ್ಧೆ – ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಕರೆ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಪಕ್ಷದ ಕಾರ್ಯಕರ್ತರ ಸಭಾ ಕಾರ್ಯಕ್ರಮವು ಬಿಸಿ ರೋಡ್ ನ ಅಲ್ ಖಝಾನ ಸಭಾಂಗಣದಲ್ಲಿ ಜರುಗಿತು. ಈ ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಕುರಿತು ಚರ್ಚೆ ನಡೆಸಲಾಯಿತು.

ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಾಹುಲ್ ಎಸ್ ಎಚ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಮಾತನಾಡಿ ರಾಜ್ಯ ಬಿಜೆಪಿ ನಿರಂಕುಶವಾದದ ಧೋರಣೆಗಳನ್ನು ಎಸಗುತ್ತಿರುವುದನ್ನು ಕಂಡೂ ಕಾಣದಂತೆ ವರ್ತಿಸುತ್ತಿರುವ ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿಗಳಂತಹ ಜಾತ್ಯಾತೀತ ಪಕ್ಷಗಳು ಮೌನದಿಂದಿರುವುದು ಖಂಡನಾರ್ಹ ಎಂದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಜಿಲ್ಲೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದು, ಅದರಲ್ಲಿ ಬಂಟ್ವಾಳವೂ ಒಂದಾಗಿದೆ. ಪರ್ಯಾಯ ರಾಜಕೀಯ ವ್ಯವಸ್ಥೆ ಎಸ್ ಡಿ ಪಿ ಐ ಕುರಿತು  ಜನಮನದಲ್ಲಿ ಅಚ್ಚುಮೂಡಿಸಿ ಬಂಟ್ವಾಳದಲ್ಲಿ ಗೆಲ್ಲಿಸುವ ಶತ ಪ್ರಯತ್ನವನ್ನು ಕಾರ್ಯಕರ್ತರು ಮಾಡಬೇಕು. ಪ್ರತಿಯೊಂದು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ಮಾತನಾಡಿ ಪ್ರಸ್ತುತ ರಾಜ್ಯದಲ್ಲಿ ಅರಾಜಕತೆಯಲ್ಲಿ ಮುಳುಗಿದೆ, ಈ ಎಲ್ಲ ಸತ್ಯದ ಸಂಗತಿಗಳನ್ನು ಪಕ್ಷದ ಕಾರ್ಯಕರ್ತರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಗೆ ಎಳೆಎಳೆಯಾಗಿ ಬಿಚ್ಚಿಡುವ ಮೂಲಕ ಭಾಜಪಾವನ್ನು ಅಧಿಕಾರದಿಂದ  ನಿರ್ಮೂಲನೆ ಮಾಡುವಲ್ಲಿ ನಿರತರಾಗಬೇಕು ಎಂದು ಹೇಳಿದರು.

ಜಾಹೀರಾತು

ಎಸ್ ಡಿ ಪಿ ಐ ದ.ಕ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಪಕ್ಷದ ಬೆಳವಣಿಗೆ ಮತ್ತು ಪ್ರಸ್ತುತ ಆಗುಹೋಗುಗಳ ಬಗ್ಗೆ ನುಡಿದು ಪ್ರಾಸ್ತಾವಿಕ ಭಾಷಣಗೈದರು. ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಸಮಾರೋಪ ಭಾಷಣಗೈದರು.

ಈ ಸಂದರ್ಭ ಎಸ್ ಡಿ ಪಿ ಐ ದ.ಕ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ದ.ಕ ಜಿಲ್ಲಾ ಸಮಿತಿ ಸದಸ್ಯರುಗಳಾದ ಅಬೂಬಕ್ಕರ್ ಮದ್ದ, ಯೂಸುಫ್ ಆಲಡ್ಕ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಬಂಟ್ವಾಳ ತಾಲೂಕಿನವರು ಆದ ಇಲ್ಯಾಸ್ ಮುಹಮ್ಮದ್ ತುಂಬೆಯವರನ್ನು ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಶಾಲು ಹಾಕಿ ಹೂಗುಚ್ಚ ನೀಡಿ ಸನ್ಮಾನಿಸಲಾಯಿತು . ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು ಶಾಹುಲ್ ಹಮೀದ್ ಸ್ವಾಗತಿಸಿ ಮೂನಿಶ್ ಆಲಿ ಧನ್ಯವಾದಗೈದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯಕರ್ತರ ಸಭೆ: ಬಂಟ್ವಾಳದಲ್ಲಿ ಸ್ಪರ್ಧೆ – ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಕರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*