ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ‘ಅರಿವು’ ವಿಶೇಷ ಮಕ್ಕಳ ತರಬೇತಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಶೇಷವಾಗಿ ಆಚರಿಸಲಾಯಿತು. ಈ ಸಂದರ್ಭ ಮಕ್ಕಳು ಕೃಷ್ಣ ವೇಷ ಧರಿಸಿ ಗಮನ ಸೆಳೆದರು. ಈ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಅರಿವು ವಿಶೇಷ ಹಾಗೂ ಕಲಿಕಾ ಸಮಸ್ಯೆ ಇರುವ ಮಕ್ಕಳಿಗೆ ತರಬೇತಿ ಕೊಡುವ ಕೇಂದ್ರವಾಗಿದ್ದು ಸಮಸ್ಯೆ ಇರುವ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ಮಹತ್ತರ ಪಾತ್ರ ವಹಿಸಿದೆ.
ಲಯನ್ಸ್ ನೇತ್ರಾವತಿ ಕ್ಲಬ್ ಅಧ್ಯಕ್ಷರು ಹಾಗೂ ತಂಡದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುದ್ದು ಕೃಷ್ಣ ಆರತಿ, ನೃತ್ಯ, ಚಂಡೆ ಪ್ರದರ್ಶನ ವಿಶೇಷ ಆಕರ್ಷಣೆ ಆಗಿತ್ತು.
ನಿವೃತ್ತ ಮುಖ್ಯ ಶಿಕ್ಷಕಿ ಉದಯಕುಮಾರಿ, ಅಂಗನವಾಡಿ ಅಧ್ಯಕ್ಷೆ ಆಶಾಲತಾ ವಿಶೇಷ ಆಹ್ವಾನಿತಾರಾಗಿ ಶುಭ ಹಾರೈಸಿದರು . ಲಯನ್ಸ್ ನೇತ್ರಾವತಿ ಅಧ್ಯಕ್ಷೆ ಆಶಾಲತಾ ಮಾತನಾಡಿ ಲಯನ್ಸ್ ನೇತ್ರಾವತಿ ವಿಶೇಷ ಮಕ್ಕಳ ಅಭಿವೃದ್ಧಿಗೆ ಸದಾ ಬೆಂಬಲ ನೀಡುತ್ತದೆ ಎಂದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಕೃಷ್ಣ ವೇಷ ಧರಿಸಿ ಗಮನ ಸೆಳೆದ ‘ಅರಿವು’ ಮಕ್ಕಳು"