ಜಿಲ್ಲಾ ಸುದ್ದಿ

ಕೃಷ್ಣ ವೇಷ ಧರಿಸಿ ಗಮನ ಸೆಳೆದ ‘ಅರಿವು’ ಮಕ್ಕಳು

ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ‘ಅರಿವು’ ವಿಶೇಷ ಮಕ್ಕಳ ತರಬೇತಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಶೇಷವಾಗಿ ಆಚರಿಸಲಾಯಿತು. ಈ ಸಂದರ್ಭ ಮಕ್ಕಳು ಕೃಷ್ಣ ವೇಷ ಧರಿಸಿ ಗಮನ ಸೆಳೆದರು. ಈ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಅರಿವು ವಿಶೇಷ ಹಾಗೂ ಕಲಿಕಾ ಸಮಸ್ಯೆ ಇರುವ ಮಕ್ಕಳಿಗೆ ತರಬೇತಿ ಕೊಡುವ ಕೇಂದ್ರವಾಗಿದ್ದು ಸಮಸ್ಯೆ ಇರುವ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ಮಹತ್ತರ ಪಾತ್ರ ವಹಿಸಿದೆ.

ಲಯನ್ಸ್ ನೇತ್ರಾವತಿ ಕ್ಲಬ್ ಅಧ್ಯಕ್ಷರು ಹಾಗೂ ತಂಡದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುದ್ದು ಕೃಷ್ಣ ಆರತಿ, ನೃತ್ಯ, ಚಂಡೆ ಪ್ರದರ್ಶನ ವಿಶೇಷ ಆಕರ್ಷಣೆ ಆಗಿತ್ತು.

ನಿವೃತ್ತ ಮುಖ್ಯ ಶಿಕ್ಷಕಿ ಉದಯಕುಮಾರಿ, ಅಂಗನವಾಡಿ ಅಧ್ಯಕ್ಷೆ ಆಶಾಲತಾ ವಿಶೇಷ ಆಹ್ವಾನಿತಾರಾಗಿ ಶುಭ ಹಾರೈಸಿದರು . ಲಯನ್ಸ್ ನೇತ್ರಾವತಿ ಅಧ್ಯಕ್ಷೆ ಆಶಾಲತಾ ಮಾತನಾಡಿ ಲಯನ್ಸ್ ನೇತ್ರಾವತಿ ವಿಶೇಷ ಮಕ್ಕಳ ಅಭಿವೃದ್ಧಿಗೆ ಸದಾ ಬೆಂಬಲ ನೀಡುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ