ಯಕ್ಷಗಾನ

ಪೆರುವಡಿ ನಾರಾಯಣ ಭಟ್ಟರಿಗೆ ‘ಭ್ರಾಮರೀ ಯಕ್ಷಮಣಿ ಪ್ರಶಸ್ತಿ’ ಪ್ರದಾನ

ಭ್ರಾಮರೀ ಯಕ್ಷಮಿತ್ರರು ಮಂಗಳೂರು ಇದರ ಐದನೇ ವರ್ಷದ ‘ಭ್ರಾಮರೀ ಯಕ್ಷವೈಭವ-೨೦೨೨’ ಕಾರ್ಯಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಸಂಜೆಯಿಂದ ರವಿವಾರ ಮುಂಜಾನೆಯವರೆಗೆ ಜರಗಿತು.

ಯಕ್ಷಗಾನದ ಹಿರಿಯ ಹಾಸ್ಯಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ‘ಭ್ರಾಮರೀ ಯಕ್ಷಮಣಿ ಪ್ರಶಸ್ತಿ’, ನೇಪಥ್ಯ ಕಲಾವಿದರಾದ ಗೋಪಾಲ ಪೂಜಾರಿ ಹಾಗೂ ಬೊಕ್ಕಸ ಜಗನ್ನಾಥ ರಾವ್ ಅವರಿಗೆ ಭ್ರಾಮರೀ ಯಕ್ಷಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಮಲ್ಯಾಡಿ ಲೈವ್ MALYADI LIVE ನಲ್ಲಿ ಪೂರ್ತಿ ವೀಕ್ಷಿಸಬಹುದು

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್ ಅವರು ಮಾತನಾಡಿ, ‘ಯಕ್ಷಗಾನ ಅಭಿರುಚಿಯ ವಾಟ್ಸಾಫ್ ಬಳಗ ಮಳೆಗಾಲದ ಸಮಯದಲ್ಲಿ ಯಕ್ಷಗಾನ ಹಾಗೂ ಆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು, ನೇಪಥ್ಯ ಕಲಾವಿದರನ್ನು ಗೌರವಿಸುವ ಮಹಾನ್ ಕಾರ್ಯಕ್ರಮವನ್ನು ಪ್ರತೀ ವರ್ಷ ರೂಪಿಸುತ್ತಿರುವುದು ಶ್ಲಾಘನೀಯ’ ಎಂದರು.

ಜಾಹೀರಾತು
ಚಿತ್ರಕೃಪೆ: ರಂಜನ್ ಹೊಳ್ಳ

ಹಿರಿಯ ಯಕ್ಷಗಾನ ಪ್ರಸಂಗಕರ್ತ ಪೊಳಲಿ ನಿತ್ಯಾನಂದ ಕಾರಂತ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಮಂಗಳೂರು ಗಣೇಶೋತ್ಸವದ ಅಧ್ಯಕ್ಷ ಶಶಿಕಾಂತ್ ನಾಗ್ವೇಕರ್, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಅವರು ಕಾರ್ಯಕ್ರಮವನ್ನು ಶ್ಲಾಘಿಸಿದರು.

ಚಿತ್ರಕೃಪೆ: ಸುರೇಶ್
ಚಿತ್ರಕೃಪೆ: ರಂಜನ್ ಹೊಳ್ಳ

ಇತ್ತೀಚೆಗೆ ನಿಧನ ಹೊಂದಿದ ಬಲಿಪ ಪ್ರಸಾದ್ ಭಟ್ ಅವರ ಮನೆಯವರಿಗೆ ಭ್ರಾಮರೀ ಬಳಗದ ವತಿಯಿಂದ ೨೦ ಸಾವಿರ ರೂ. ಹಸ್ತಾಂತರಿಸಲಾಯಿತು. ಬಳಗದ ಅಧ್ಯಕ್ಷ ವಿನಯಕೃಷ್ಣ ಕುರ್ನಾಡ್ ಸ್ವಾಗತಿಸಿದರು. ಗುರುರಾಜ ಹೊಳ್ಳ ಬಾಯಾರು ಅವರು ಪ್ರಸಾದ ಭಟ್ ಸಂಸ್ಮರಣೆ ಹಾಗೂ ನಿರೂಪಿಸಿದರು. ಶೈಲೇಶ್ ಪಚ್ಚನಾಡಿ ಸಮ್ಮಾನ ಪತ್ರ ವಾಚಿಸಿದರು. ಬಳಿಕ ಯಕ್ಷಗಾನ ಪೂರ್ವರಂಗ, ಚೆಂಡೆ ಜುಗಲ್ ಬಂದಿ ಹಾಗೂ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ದಮಯಂತಿ ಪುನಃ ಸ್ವಯಂವರ, ಮಾಯಾ ತಿಲೋತ್ತಮೆ, ವೀರವರ್ಮ ಕಾಳಗ ಯಕ್ಷಗಾನ ಪ್ರದರ್ಶನ ಜರಗಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.