ಬಂಟ್ವಾಳ

ಆ.31ರಿಂದ ಸೆ.4ರವರೆಗೆ ರೈ ನೇತೃತ್ವದಲ್ಲಿ ಜಕ್ರಿಬೆಟ್ಟಿನಲ್ಲಿ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

2020ರಲ್ಲಿ ಜಕ್ರಿಬೆಟ್ಟಿನಲ್ಲಿ ಪೂಜಿಸಲಾದ ಗಣಪತಿ

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು, ಬಂಟ್ವಾಳ ದ.ಕ. ವತಿಯಿಂದ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ.31ರಿಂದ ಸೆ.4ರ ಭಾನುವಾರದವರೆಗೆ ಬಂಟ್ವಾಳದ ಜಕ್ರಿಬೆಟ್ಟಿನಲ್ಲಿ ನಡೆಯಲಿದೆ.

ರಮಾನಾಥ ರೈ

ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸರ್ವಧರ್ಮದ ಭಗವದ್ಭಕ್ತರೊಂದಿಗೆ ಅರ್ಥಪೂರ್ಣವಾಗಿ ಮತ್ತು ವೈಭವಯುತವಾಗಿ ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತದೆ ಎಂದು ಗೌರವಾಧ್ಯಕ್ಷ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭಾನುವಾರ ಬಿ.ಸಿ.ರೋಡಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಗಣೇಶೊತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.  ವೈದ್ಯ, ಸ್ಥಳದಾನಿ ಡಾ. ಶಿವಪ್ರಸಾದ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ನಿತ್ಯ ಅನ್ನಸಂತರ್ಪಣೆ, ಭಜನೆ, ತುಳು ನಾಟಕಗಳು, ಯಕ್ಷಗಾನ ಕಾರ್ಯಕ್ರಮಗಳು ಇರಲಿವೆ. ಕಲಾ ತಂಡಗಳು, ಸ್ತಬ್ದ ಚಿತ್ರಗಳೊಂದಿಗೆ ಶೋಭಾಯಾತ್ರೆ ಇರಲಿದೆ. ಸಭೆಗಳಲ್ಲಿ ಧಾರ್ಮಿಕ ಕ್ಷೇತ್ರದ ಸಾಧುಸಂತರು, ಮಠಾಧೀಶರು, ರಾಜಕೀಯ ನೇತಾರರು, ಧರ್ಮಗುರುಗಳು, ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದರು. 32 ಭಜನಾ ತಂಡಗಳಿಂದ ಭಜನಾ ಸೇವೆ ಇರಲಿರುವುದು ಈ ಬಾರಿಯ ವಿಶೇಷ ಎಂದವರು ತಿಳಿಸಿದರು.

ಜಾಹೀರಾತು

ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ವಿವಿಧ ಪದಾಧಿಕಾರಿಗಳಾದ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಪದ್ಮನಾಭ ರೈ, ಜನಾರ್ದನ ಚಂಡ್ತಿಮಾರ್, ರಾಜೀವ ಶೆಟ್ಟಿ ಎಡ್ತೂರು, ಬೇಬಿ ಕುಂದರ್, ಸಂಪತ್ ಕುಮಾರ್ ಶೆಟ್ಟಿ, ಸುಧಾಕರ ರೈ, ಮಹಾಬಲ ಬಂಗೇರ, ಪ್ರವೀಣ್ ಜಕ್ರಿಬೆಟ್ಟು, ಸುರೇಶ್ ಜೋರ, ಲೋಲಾಕ್ಷ ಟಿ, ಉಮೇಶ್ ಕುಲಾಲ್, ಶಬೀರ್ ಸಿದ್ದಕಟ್ಟೆ, ಚಂದ್ರಶೇಖರ ಶೆಟ್ಟಿ, ವೆಂಕಪ್ಪ ಪೂಜಾರಿ, ರಾಜೀವ ಕಕ್ಯಪದವು, ಪದ್ಮನಾಭ ಸಾಮಂತ್, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಸುದೀಪ್ ಕುಮಾರ್ ಶೆಟ್ಟಿ, ಸುಭಾಶ್ಚಂದ್ರ ಶೆಟ್ಟಿ, ಸುಧಾಕರ ಶೆಣೈ, ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.