ಬಂಟ್ವಾಳ

ಬಿ.ಮೂಡ ಕಾಲೇಜಿನ ಎನ್ನೆಸ್ಸೆಸ್ ನಿಂದ ನಾಯಕತ್ವ ತರಬೇತಿ ಶಿಬಿರ

ಬಂಟ್ವಾಳ: ಉತ್ತಮ ಸೇವಕರಿಗೆ ಮಾತ್ರ  ಒಳ್ಳೆಯ ನಾಯಕರಾಗಲು ಸರ್ವ ಅವಕಾಶಗಳು ಒದಗಿ ಬರುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಕಾಲೇಜುಗಳಲ್ಲಿ ಎನ್ನೆಸ್ಸಸ್  ಘಟಕಕ್ಕೆ ಸೇರಿ ಸೇವಾ ಪರಿಣತಿ ಪಡೆದುಕೊಳ್ಳಬೇಕು ಎಂದು ಬಿ.ಮೂಡ ಸ.ಪ.ಪೂ.ಕಾಲೇಜಿನ ಪ್ರಿನ್ಸಿಪಾಲ್ ಯೂಸುಫ್ ವಿಟ್ಲ ಇಲ್ಲಿ ಹೇಳಿದರು.

ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್ ಡಿಪಿ) ಅನ್ವಯ ಕಾಲೇಜಿನ ಎನ್.ಎಸ್. ಎಸ್.ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ  ಶನಿವಾರದಂದು ನಡೆದ ನಾಯಕತ್ವ ತರಬೇತಿ ಶಿಬಿರವನ್ನು  ಉದ್ಘಾಟಿಸಿ ಮಾತನಾಡಿದರು. ಯುಎನ್ ಡಿಪಿಯ  ರಾಜ್ಯ ತರಬೇತುದಾರರಾದ  ಶ್ರೀಕಾಂತ್ ಪೂಜಾರಿ ಮತ್ತು ಸುರಕ್ಷಾ  ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.ಸಂಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ್. ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ದಾಮೋದರ.ಇ ಸಹಕರಿಸಿದರು. ವಿದ್ಯಾರ್ಥಿನಿ ಸಂಧ್ಯಾ ಸ್ವಾಗತಿಸಿದರು. ಘಟಕದ ನಾಯಕ ಧನುಷ್ ಧನ್ಯವಾದ ಸಲ್ಲಿಸಿದರು. ಶರಣ್ಯ ಕಾರ್ಯಕ್ರಮ ನಿರ್ವಹಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ