ಜಿಲ್ಲಾ ಸುದ್ದಿ

ಎನ್.ಡಿ.ಎ. ದುರಾಡಳಿತ ವಿರುದ್ಧ ಕೆಂಬಾವುಟ: ಸಿಪಿಐ ಜಿಲ್ಲಾ ಸಮ್ಮೇಳನದಲ್ಲಿ ಸಿದ್ಧನಗೌಡ ಪಾಟೀಲ

ಬಂಟ್ವಾಳ: ಕೇಂದ್ರದ ಎನ್.ಡಿ.ಎ. ಸರ್ಕಾರದ ದುರಾಡಳಿತ ವಿರುದ್ಧ ಕೆಂಬಾವುಟ ಹಿಡಿದು ಹೋರಾಟ ಇಂದು ಅಗತ್ಯವಿದ್ದು, ಇದುವರೆಗಿನ ಇತಿಹಾಸದಲ್ಲಿ ಸಿಪಿಐ ಹಕ್ಕೊತ್ತಾಯದಿಂದಾಗಿಯೇ ಉಳುವವನು ಹೊಲದೊಡೆಯನಾಗಿದ್ದಾನೆ. ಕೋಮುವಾದವನ್ನು ಮೆಟ್ಟಿ ನಿಲ್ಲಲು ಸಿಪಿಐ ಬಲಗೊಳ್ಳುವುದು ಅನಿವಾರ್ಯ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಮಾಜಿ ಸದಸ್ಯ ಡಾ. ಸಿದ್ಧನಗೌಡ ಪಾಟೀಲ ಹೇಳಿದ್ದಾರೆ.

ಬಂಟ್ವಾಳದ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐ)ದ ದ.ಕ. ಮತ್ತು ಉಡುಪಿ ಜಿಲ್ಲಾ ೨೪ನೇ ಸಮ್ಮೇಳನದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಗುಲಾಮರಾಗಿದ್ದ ಆರ್‌ಎಸ್‌ಎಸ್‌ನವರು ಸ್ವಾತಂತ್ರ್ಯ ಸಿಕ್ಕ ಮೇಲೆ ಹೋರಾಟಗಾರರಾಗುತ್ತಾರೆ. ಆದರೆ ನಿಜವಾದ ಸ್ವಾತಂತ್ರ್ಯ ಹೋರಾಟಗಾರರಾದ ಕಮ್ಯೂನಿಸ್ಟ್ ಪಕ್ಷದ ಬಹುತೇಕ ನಾಯಕರು ಜೈಲಿನಲ್ಲಿರುತ್ತಾರೆ. ಗಾಂಧಿಯನ್ನು ಹತ್ಯೆ ಮಾಡಿದ ಗೋಡ್ಸೆಗೆ ಗುರುವಾಗಿದ್ದ ಸಾವರ್ಕರ್‌ಗೆ ಇಂದು ಹೋರಾಟಗಾರರ ಪಟ್ಟಕಟ್ಟಿ ಪಠ್ಯಪುಸ್ತಕದಲ್ಲಿ ಸ್ಥಾನ ನೀಡಿರುವುದು ದುರಂತ ಎಂದರು.

ಜಾಹೀರಾತು

ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಮುಖ್ಯಭಾಷಣ ಮಾಡಿ, ಜನರಿಗೆ ಉದ್ಯೋಗವೇ ಇಲ್ಲದಾಗಿದ್ದು, ಬಡವರು ಇನ್ನಷ್ಟು ಬಡವರಾಗುತ್ತಿದ್ದಾರೆ. ದೇಶದ ಸಾರ್ವಜನಿಕ ಉದ್ದಿಮೆ, ಮೂಲ ಸೌಲಭ್ಯಗಳನ್ನು ಮಾರಾಟ ಮಾಡಲಾಗುತ್ತಿದ್ದು, ಇವೆಲ್ಲದರ ವಿರುದ್ಧ ಯುವಶಕ್ತಿ ಸಿಪಿಐ ಜತೆಸೇರಿ ಹೋರಾಟ ಸಂಘಟಿಸಬೇಕಿದೆ ಎಂದರು.

ಸಿಪಿಐ ದ.ಕ.ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ಅಧ್ಯಕ್ಷತೆ ವಹಿಸಿದ್ದರು. ನೂತನ ಕಾರ್ಯದರ್ಶಿ ಬಿ.ಶೇಖರ್ ಪ್ರಸ್ತಾವನೆಗೈದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸುರೇಶ್‌ಕುಮಾರ್ ನೇತೃತ್ವದಲ್ಲಿ ಕ್ರಾಂತಿ ಗೀತೆ ಹಾಡಲಾಯಿತು. ಪಕ್ಷದ ಪ್ರಮುಖರಾದ ಪುಷ್ಪರಾಜ್ ಬೋಳಾರ್, ಎ.ಪ್ರಭಾಕರ ರಾವ್, ಭಾರತಿ ಶಂಭೂರು, ಕರುಣಾಕರ ಎಂ., ಬಿ.ಬಾಬು ಭಂಡಾರಿ, ಮೂಡಿಗೆರೆಯ ಮುಂದಾಳು ರಮೇಶ್ ಕುಮಾರ್ ಮೊದಲಾದವರಿದ್ದರು. ಜಿಲ್ಲಾ ಸಹ ಕಾರ್ಯದರ್ಶಿ ವಿ.ಸೀತಾರಾಮ ಬೇರಿಂಜ ಕಾರ್ಯಕ್ರಮ ನಿರ್ವಹಿಸಿದರು. ಸಭೆಯ ಪೂರ್ವಭಾವಿಯಾಗಿ ಬಿ.ಸಿ.ರೋಡಿನ ಕೈಕಂಬದಿಂದ ಸಮ್ಮೇಳನದ ಸಭಾಭವದವರೆಗೆ ಬೃಹತ್ ರ್‍ಯಾಲಿ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts