ಬಂಟ್ವಾಳದಲ್ಲಿ ಬಿ.ಜಿ.ಮೋಹನದಾಸ್ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಭಾನುವಾರ ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ಮತ್ತು ಗಲ್ಫ್ ಕನ್ನಡಿಗ ಡಾಟ್ ಕಾಮ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಸಂಶುದ್ದೀನ್ ಎಣ್ಮೂರು ಅವರಿಗೆ ಬಿ.ಜಿ.ಮೋಹನದಾಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದಕ್ಕೂ ಮುನ್ನ ಕವಿಗೋಷ್ಠಿ ನಡೆಯಿತು.

ವೆಬ್ ಸೈಟ್ ಗಳಲ್ಲಿ ಪ್ರಕಟವಾಗುವ ಅತ್ಯುತ್ತಮ ವರದಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ಗಲ್ಫ್ ಕನ್ನಡಿಗ ಡಾಟ್ ಕಾಮ್ ಸಂಸ್ಥಾಪಕ ಬಿ.ಜಿ.ಮೋಹನದಾಸ್ ನೆನಪಿಗೆ ನೀಡಲಾಗುತ್ತಿದ್ದು, ಇದು ಎರಡನೇ ಕಾರ್ಯಕ್ರಮವಾಗಿದೆ. ಕಳೆದ ಬಾರಿ ವಾರ್ತಾಭಾರತಿ ಪತ್ರಿಕೆಯ ಇಮ್ತಿಯಾಜ್ ಶಾ ತುಂಬೆ ಅವರಿಗೆ ಪ್ರಶಸ್ತಿ ಲಭಿಸಿತ್ತು. ಕನ್ನಡದ ಡಿಜಿಟಲ್ ಮಾಧ್ಯಮಗಳಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ಗಲ್ಫ್ ಕನ್ನಡಿಗ ಡಾಟ್. ಕಾಮ್ ‘ನಿರತ’ ಜೊತೆಗೂಡಿ ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ.

ಬಿ.ಜಿ.ಮೋಹನ್ ದಾಸ್ ಅವರ ಸಹೋದರ, ಉಡುಪಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಜಂಟಿ ಕಾರ್ಯದರ್ಶಿ ಬಿ.ಜಿ.ಲಕ್ಷ್ಮೀಕಾಂತ್ ಬೆಸ್ಕೂರ್ ಮಾತನಾಡಿ, ಸಮಾಜದಲ್ಲಿ ಕಡೆಗಣಿಸಲ್ಪಟ್ಟ, ಸಮಾಜದಿಂದ ಸಂಕಷ್ಟದಲ್ಲಿ ಇರುವ, ಮುಖ್ಯವಾಹಿನಿಯಿಂದ ದೂರ ಉಳಿದವರ ಬಗ್ಗೆ ಬಿ.ಜಿ ಮೋಹನ್ ದಾಸ್ ಅವರು ಅಪಾರ ಕಾಳಜಿ ವಹಿಸುತ್ತಿದ್ದರು. ಅವರ ಹೆಸರಿನಲ್ಲಿ ಪ್ರದಾನಿಸುವ ಪ್ರಶಸ್ತಿ ಕೊರಗರ ಬಗೆಗಿನ ಲೇಖನ ಆಯ್ಕೆಯಾಗಿರುವುದು ಅವರಿಗೆ ಸಂದ ಗೌರವವಾಗಿದೆ ಎಂದರು.

ಜಾಹೀರಾತು

ನಿರತ ಸಾಹಿತ್ಯ ಸಂಪದ ಅಧ್ಯಕ್ಷ ಬ್ರಿಜೇಶ್ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ವಕೀಲ ಸುಕೇಶ್ ಕುಮಾರ್ ಶೆಟ್ಟಿ ಬಿ.ಜಿ.ಮೋಹನ್ ದಾಸ್ ಅವರ ಪರಿಚಯ ಭಾಷಣ ಮಾಡಿದರು. ಉಪನ್ಯಾಸಕ ಅಬ್ದುಲ್ ಮಜೀದ್ ಅವರು ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ ಉಪಸ್ಥಿತರಿದ್ದರು.  ಪ್ರಶಸ್ತಿಯ ತೀರ್ಪುಗಾರರಲ್ಲೊಬ್ಬರಾದ ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಪ್ರಶಸ್ತಿ ಗೆ ಪಾಲ್ಗೊಂಡ ವರದಿಗಳ ಬಗ್ಗೆ ವಿಶ್ಲೇಷಿಸಿದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೂ ಮೊದಲು ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬಿ.ಎಂ.ತುಂಬೆ ಉದ್ಘಾಟಿಸಿದರು. ರಾಯಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಜಯರಾಮ ಪಡ್ರೆ ಅಧ್ಯಕ್ಷತೆ ವಹಿಸಿದ್ದರು. ಕವಿಗೋಷ್ಠಿಯಲ್ಲಿ  ಡಾ | ಮೈತ್ರಿ ಭಟ್,  ಮಹೇಂದ್ರನಾಥ್ ಸಾಲೆತ್ತೂರು , ತುಳಸಿ ಕೈರಂಗಳ್ , ಸುಹಾನ ಸೈಯ್ಯದ್ , ದೀಪ್ತಿ ಪಿ,  ಫಾತಿಮಾ ಪರ್ವೀನ್, ಶಶಿಕಲಾ ಭಾಸ್ಕರ್,  ನಳಿನಿ ಬಿ ರೈ ಮಂಚಿ, ವಿಶ್ವನಾಥ್ ಕುಲಾಲ್ ಮಿತ್ತೂರು , ಆಶೋಕ್ ಎನ್ ಕಡೇಶ್ವಾಲ್ಯ ,ಖತೀಜತುಲ್ ನಝೀಲ,  ಸಂಧ್ಯಾ ಕುಮಾರಿ ಎಸ್ , ಮಹಿಮಾ ಆರ್ ಕೆ, ನಂದಿತಾ ವಿಟ್ಲ ಕವನ ವಾಚಿಸಿದರು. ಮಹಮ್ಮದ್ ತುಂಬೆ ಉಪಸ್ಥಿತರಿದ್ದರು. ಪಾಣೆಮಂಗಳೂರು ಶಾರದಾ ಪ್ರೌಢ ಶಾಲೆಯ ಸಹಶಿಕ್ಷಕಿ ಸುಧಾ ನಾಗೇಶ್ ಸ್ವಾಗತಿಸಿದರು. ಕರುಣಾಕರ ಮಾರಿಪಳ್ಳ ಧನ್ಯವಾದಗೈದರು. ಬಿ.ಎಂ.ರಫೀಕ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಬಿ.ಜಿ.ಮೋಹನದಾಸ್ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*