ಬಂಟ್ವಾಳ

ಅಧಿವಕ್ತ ಪರಿಷತ್ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಾನೂನು ಕಾರ್ಯಾಗಾರ

ಬಂಟ್ವಾಳ: ಅಖಿಲ ಭಾರತೀಯ ಅದಿವಕ್ತ ಪರಿಷತ್  ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಾನೂನು ಕಾರ್ಯಾಗಾರ ಬಂಟ್ವಾಳದ ಜೆ. ಎಂ. ಎಫ್. ಸಿ. ನ್ಯಾಯಾಲಯದ ಎದುರು ಬುಧವಾರ ನಡೆಯಿತು.

ಅಧಿವಕ್ತ ಪರಿಷತ್, ಬಂಟ್ವಾಳ, ವಕೀಲರ ಸಂಘ(ರಿ), ಬಂಟ್ವಾಳ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮವನ್ನು ಅಧಿವಕ್ತ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ರಾಜ್ಯಾಧ್ಯಕ್ಷ ರವೀಂದ್ರನಾಥ ಪಿ. ಎಸ್  ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ವಕೀಲರ ಸಂಘ(ರಿ) ಬಂಟ್ವಾಳ ಅಧ್ಯಕ್ಷ ಬಿ. ಗಣೇಶಾನಂದ ಸೋಮಯಾಜಿ ವಹಿಸಿದ್ದರು. ಪರಿಷತ್ ಮಂಗಳೂರಿನ ಜಿಲ್ಲಾಧ್ಯಕ್ಷರಾದ ಪುಷ್ಪಲತಾ, ನ್ಯಾಯಧೀಶರಾದ ಚಂದ್ರಶೇಖರ ವೈ ತಳವಾರ, ಕೃಷ್ಣಮೂರ್ತಿ, ಅಧಿವಕ್ತ ಪರಿಷತ್, ಬಂಟ್ವಾಳದ ಗೌರವಾಧ್ಯಕ್ಷರಾದ ರಾಜಾರಾಮ್  ನಾಯಕ್, ಅಧಿವಕ್ತ ಪರಿಷತ್  ಬಂಟ್ವಾಳದ ಅಧ್ಯಕ್ಷರಾದ ರವೀಂದ್ರ ಕುಕ್ಕಾಜೆ ಉಪಸ್ಥಿತರಿದ್ದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ಮಂಗಳೂರಿನ ಹಿರಿಯ ವಕೀಲರಾದ ಉದಯಾನಂದ ಎ ಪ್ರೊಪೆಶನಲ್ ಎಥಿಕ್ಸ್ ಮತ್ತು ಪ್ಲೀಡಿಂಗ್ಸ್ ಬಗ್ಗೆ ಮಾಹಿತಿ ನೀಡಿದರು. ವಕೀಲರಾದ ನಿತಿನ್ ಕಾರ್ಯಕ್ರಮ ನಿರ್ವಹಿಸಿದರು. ಅಧಿವಕ್ತ ಪರಿಷತ್, ಬಂಟ್ವಾಳದ ಪ್ರಧಾನ ಕಾರ್ಯದರ್ಶಿ ವೀರೇಂದ್ರ ಎಂ ಸಿದ್ದಕಟ್ಟೆ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ