ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಪರಿಸರಸ್ನೇಹಿ ವಿದ್ಯಾಲಯ ರಾಜ್ಯಮಟ್ಟದ ಕಾರ್ಯಾಗಾರವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಕಡ್ಕ ಉದ್ಘಾಟಿಸಿದರು. ಪರ್ಯಾವರಣ ಸಂರಕ್ಷಣಾ ಗತಿವಿಧಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಜಲವನ್ನು ಹಿತಮಿತವಾಗಿ ಬಳಸಬೇಕು. ಅಪವ್ಯಯ ಸಲ್ಲದು. ನಮಗೆ ಸರ್ವವನ್ನೂಕೊಟ್ಟಿರುವ ಭೂಮಿ, ಮಾತೃ ಭೂಮಿರಕ್ಷಣೆ ನಮ್ಮ ಧ್ಯೇಯವಾಗಬೇಕು ಎಂದು ಹೇಳಿದರು.
ಪರ್ಯಾವರಣ ಸಂರಕ್ಷಣಾ ಗತಿವಿಧಿಯ ಸಂಯೋಜಕರಾದ ವೆಂಕಟೇಶ ಸಂಗನಾಳ ಮತ್ತು ನರಸಿಂಹ ಪ್ರಸಾದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರಿನ್ಸಿಪಾಲ್ ಕೃ?ಪ್ರಸಾದ ಕಾಯರ್ಕಟ್ಟೆ ತಮ್ಮ ವಿದ್ಯಾಸಂಸ್ಥೆಯಲ್ಲಿ ಅಳವಡಿಸಿಕೊಂಡಿರುವ ಪರಿಸರ ಸ್ನೇಹಿ ಅಂಶ ಕುರಿತು ವಿವರಿಸಿದರು. ೧೨೦ಕ್ಕೂ ಅಧಿಕ ಶಿಕ್ಷಕ ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮತಮ್ಮ ಶಾಲೆಗಳಲ್ಲಿ ಪರಿಸರ ಸ್ನೇಹಿ ಅಂಶಗಳನ್ನು ಅಳವಡಿಸಿಕೊಳ್ಳಲು ಸಹಮತಿಸಿದರು. ಅರುಣಕುಮಾರ ಸ್ವಾಗತಿಸಿದರು. ಗಾಯತ್ರಿ ಪ್ರಾರ್ಥಿಸಿದರು. ಚಂದ್ರಹಾಸ ಪಿ. ಕಾರ್ಯಕ್ರಮ ನಿರ್ವಹಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಪರಿಸರಸ್ನೇಹಿ ವಿದ್ಯಾಲಯ ರಾಜ್ಯಮಟ್ಟದ ಕಾರ್ಯಾಗಾರ"
Be the first to comment on "ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಪರಿಸರಸ್ನೇಹಿ ವಿದ್ಯಾಲಯ ರಾಜ್ಯಮಟ್ಟದ ಕಾರ್ಯಾಗಾರ"