ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಪರಿಸರಸ್ನೇಹಿ ವಿದ್ಯಾಲಯ ರಾಜ್ಯಮಟ್ಟದ ಕಾರ್ಯಾಗಾರ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಪರಿಸರಸ್ನೇಹಿ ವಿದ್ಯಾಲಯ ರಾಜ್ಯಮಟ್ಟದ ಕಾರ್ಯಾಗಾರವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಕಡ್ಕ ಉದ್ಘಾಟಿಸಿದರು. ಪರ್ಯಾವರಣ ಸಂರಕ್ಷಣಾ ಗತಿವಿಧಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಜಲವನ್ನು ಹಿತಮಿತವಾಗಿ ಬಳಸಬೇಕು. ಅಪವ್ಯಯ ಸಲ್ಲದು. ನಮಗೆ ಸರ್ವವನ್ನೂಕೊಟ್ಟಿರುವ ಭೂಮಿ, ಮಾತೃ ಭೂಮಿರಕ್ಷಣೆ ನಮ್ಮ ಧ್ಯೇಯವಾಗಬೇಕು ಎಂದು ಹೇಳಿದರು.

ಪರ್ಯಾವರಣ ಸಂರಕ್ಷಣಾ ಗತಿವಿಧಿಯ ಸಂಯೋಜಕರಾದ ವೆಂಕಟೇಶ ಸಂಗನಾಳ ಮತ್ತು ನರಸಿಂಹ ಪ್ರಸಾದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರಿನ್ಸಿಪಾಲ್ ಕೃ?ಪ್ರಸಾದ ಕಾಯರ್‌ಕಟ್ಟೆ ತಮ್ಮ ವಿದ್ಯಾಸಂಸ್ಥೆಯಲ್ಲಿ ಅಳವಡಿಸಿಕೊಂಡಿರುವ ಪರಿಸರ ಸ್ನೇಹಿ ಅಂಶ ಕುರಿತು ವಿವರಿಸಿದರು. ೧೨೦ಕ್ಕೂ ಅಧಿಕ ಶಿಕ್ಷಕ ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮತಮ್ಮ ಶಾಲೆಗಳಲ್ಲಿ ಪರಿಸರ ಸ್ನೇಹಿ ಅಂಶಗಳನ್ನು ಅಳವಡಿಸಿಕೊಳ್ಳಲು ಸಹಮತಿಸಿದರು. ಅರುಣಕುಮಾರ ಸ್ವಾಗತಿಸಿದರು. ಗಾಯತ್ರಿ ಪ್ರಾರ್ಥಿಸಿದರು. ಚಂದ್ರಹಾಸ ಪಿ. ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.