ಬಿಹಾರದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎಸ್.ಡಿ.ಪಿ.ಐ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಬಿಹಾರ ಉಸ್ತುವಾರಿಯೂ ಆಗಿರುವ ರಿಯಾಝ್ ಫರಂಗಿಪೇಟೆ ಮನೆಗೆ ಗುರುವಾರ ಬೆಳಗ್ಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆಗಮಿಸಿ ಬಿಹಾರದಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿ ಸುಮಾರು ಎಂಟು ಗಂಟೆಗಳ ಕಾಲ ಸುದೀರ್ಘ ವಿಚಾರಣೆ, ನಡೆಸಿ, ವಿವರಗಳನ್ನು ಕಲೆಹಾಕಿದರು.
ಬೆಳಗ್ಗೆಯೇ ಆಗಮಿಸಿದ ತನಿಖಾಧಿಕಾರಿಗಳು ಮಧ್ಯಾಹ್ನದವರೆಗೂ ಇದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಿಯಾಝ್, ಪಾರದರ್ಶಕ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ, ಎನ್.ಐ.ಎ ಇತ್ಯಾದಿ ತನಿಖಾ ಸಂಸ್ಥೆಗಳು ಆಳುವ ಪಕ್ಷದ ಅಣತಿಯಂತೆ ಕಾರ್ಯನಿರ್ವಹಿಸಬಾರದು ಎಂದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)