ಶಿಕ್ಷಣ ಕ್ಷೇತ್ರದ ಸಾಧನೆ: ರಾಧಾಕೃಷ್ಣ ಭಟ್ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಪ್ರಸ್ತುತ ಪೊಳಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಧಾಕೃಷ್ಣ ಭಟ್ ಕೆ ಅವರಿಗೆ ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಪೊಳಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮುಖ್ಯ ಶಿಕ್ಷಕರಾಗಿರುವ ಅವರು ಹೈಸ್ಕೂಲಿನ ಬೆಳವಣಿಗೆಗೆ ಕಾರಣರಾದವರು.

ಸ್ಕೌಟಿಂಗ್ ನಲ್ಲಿ ಅಸಿಸ್ಟೆಂಟ್ ಲೀಡರ್ ಟ್ರೈನರ್ ಆಗಿ, ರೋಟರಿ ಗ್ರಾಮೀಣ ದಳದ ಕಾರ್ಯದರ್ಶಿಯಾಗಿ, ಚಿಣ್ಣರ ಅಂಗಳ, ನಲಿಕಲಿ, ಕ್ರಿಯಾ ಸಂಶೋಧನೆ, ಗಣಿತ ವಿಷಯಗಳಲ್ಲಿ ತಾಲೂಕು, ಜಿಲ್ಲಾ ಮಟ್ಟದ ತರಬೇತುದಾರನಾಗಿ, ಗಣಿತ ವಿಷಯ ಪರಿವೀಕ್ಷಕರಾಗಿ ಜಿಲ್ಲೆಯಲ್ಲಿ ಗಣಿತ ವಿಜ್ಞಾನ ಶಿಕ್ಷಕರ ವೇದಿಕೆ ನಿರ್ಮಿಸುವ ಮೂಲಕ ಅಂತರ್ಜಾಲ ಮೂಲಕ ಶಿಕ್ಷಕರಿಗೆ ಜ್ಞಾನ ಹಂಚುವ ಪರಿಕಲ್ಪನೆಯನ್ನು ಮಾಡಿ ಗಮನ ಸೆಳೆದಿದ್ಧಾರೆ. 1963ರಲ್ಲಿ ಬಂಟ್ವಾಳ ತಾಲೂಕಿನ ಮಾಣಿಲದಲ್ಲಿ ಕೃಷ್ಣ ಭಟ್, ಸರಸ್ವತಿ ಅಮ್ಮ ಅವರ ಪುತ್ರನಾಗಿ ಜನಿಸಿದ ಅವರು, ಪಕಳಕುಂಜ, ಅಡ್ಯನಡ್ಕಗಳಲ್ಲಿ ಪ್ರಾಥಮಿಕ, ಪ್ರೌಢ ವಿದ್ಯಾಭ್ಯಾಸ ಮುಗಿಸಿ, ವಿಠಲ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ, ವಿವೇಕಾನಂದ ಕಾಲೇಜಿನಲ್ಲಿ ಬಿಎಸ್ಸಿ ಹಾಗೂ ಮಂಗಳೂರಿನಲ್ಲಿ ಬಿಎಡ್ ಪೂರೈಸಿ, 1985ರಲ್ಲಿ ಸರ್ಕಾರಿ ಪ್ರೌಢಶಾಲೆ, ಮಂಚಿಯಲ್ಲಿ ಸಹಶಿಕ್ಷಕರಾಗಿ ಉದ್ಯೋಗ ಆರಂಭಿಸಿದರು. ಬಳಿಕ ಸರ್ಕಾರಿ ಪದವಿಪೂರ್ವ ಕಾಲೇಜು ಸಜಿಪಮೂಡ, ಸರ್ಕಾರಿ ಪ್ರೌಢಶಾಲೆ ಶಂಭೂರುಗಳಲ್ಲಿ ಕರ್ತವ್ಯ ಸಲ್ಲಿಸಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅತ್ತಾವರದ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಕರ್ತವ್ಯ ಸಲ್ಲಿಸಿ, ಮಂಗಳೂರಿನ ಉಪನಿರ್ದೇಶಕರ ಕಚೇರಿಯಲ್ಲಿ ಗಣಿತ ವಿಷಯ ಪರಿವೀಕ್ಷಣಾಧಿಕಾರಿಯಾಗಿ ಕರ್ತವ್ಯ ಸಲ್ಲಿಸಿದ ಭಟ್, ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಹೆಚ್ಚುವರಿ ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಯಾಗಿದ್ದರು. ಇದೀಗ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಿಕ್ಷಣ ಕ್ಷೇತ್ರದ ಸಾಧನೆ: ರಾಧಾಕೃಷ್ಣ ಭಟ್ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*