ಆಶಾಕಿರಣ ಇಸ್ರೇಲ್ ಫ್ರೆಂಡ್ಸ್ ಗ್ರೂಪ್ ನೀಡಿದ ನೆರವು ಹಸ್ತಾಂತರ

This image has an empty alt attribute; its file name is SAMBHRAMA-512x1024.jpeg
This image has an empty alt attribute; its file name is BANTWALNEWS-1.jpg
This image has an empty alt attribute; its file name is WhatsApp-Image-2022-08-25-at-7.55.14-AM-1-1024x1024.jpeg

ಆಶಾಕಿರಣ ಇಸ್ರೇಲ್ ಫ್ರೆಂಡ್ಸ್ ಗ್ರೂಪ್ ವತಿಯಿಂದ ತಾಲೂಕಿನ ಮೂರು ಬಡ ಕುಟುಂಬಗಳಿಗೆ ನೀಡಿದ ಆರ್ಥಿಕ ನೆರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸರ ಕಚೇರಿಯಲ್ಲಿ ಶನಿವಾರ ಹಸ್ತಾಂತರಿಸಿದರು. ಬೆನ್ನು ನೋವಿನಿಂದ ಬಳುತ್ತಿರುವ ಸಜೀಪ ಮುನ್ನೂರು ಗ್ರಾಮದ ದಳಂದಿಲ ಕೃಷ್ಣ ಪೂಜಾರಿ, ಕ್ಯಾನ್ಸರ್ ನಿಂದ ಸಾವನ್ನಪ್ಪಿದ ನರಿಕೊಂಬು ಗ್ರಾಮದ ಶಂಭೂರು ಕೊಪ್ಪಳ ನಿವಾಸಿ ಶೇಖರ ಅವರ ಪತ್ನಿ ವಾರಿಜಾ, ವೀರಕಂಭ ಗ್ರಾಮದ ಕಂಪದಬೈಲು ನಿವಾಸಿ ಮಮತಾ ಅವರ ಪುತ್ರಿ ಅಂಗವಿಕಲ ಬಾಲಕಿ ಮಹಾಲಕ್ಷ್ಮಿ ಅವರಿಗೆ ಆರ್ಥಿಕ ನೆರವು ನೀಡಲಾಗಿದೆ.

ಇಸ್ರೇಲ್ ದೇಶದಲ್ಲಿ ದುಡಿಯುವ ಕರಾವಳಿಯ ಕನ್ನಡಿಗರ ಸಹಾಯಹಸ್ತ ನೀಡುವ ಗುಂಪಾಗಿರುವ ಆಶಾಕಿರಣ ಇಸ್ರೇಲ್ ಇಸ್ರೇಲ್ ಫ್ರೆಂಡ್ಸ್ ಹೆಲ್ಪಿಂಗ್ ಗ್ರೂಪ್ ಮೂಲಕ ದ.ಕ. ಹಾಗೂ ಉಡುಪಿ ಜಿಲ್ಲೆಗಳ ಬಡ ಕುಟುಂಬಗಳಿಗೆ ಪ್ರತಿ ತಿಂಗಳು 50 ಸಾವಿರ ರೂ ಗಳನ್ನು ನೀಡುತ್ತಿದ್ದು, ದಿನಕರ ಪುತ್ರನ್ ಎಂಬವರು ಇದನ್ನು ರಚಿಸಿದ್ದಾರೆ. ಆರಂಭದಲ್ಲಿ ಎಂಟು ಸದಸ್ಯರಿದ್ದ ಈ ಗ್ರೂಪ್ ಐದು ವರ್ಷಗಳಲ್ಲಿ 33ಕ್ಕೇರಿದೆ. ಈವರೆಗೆ 105 ಮಂದಿಗೆ ಆರ್ಥಿಕ ನೆರವನ್ನು ಈ ಗ್ರೂಪ್ ನೀಡಿದೆ.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಆಶಾಕಿರಣ ಇಸ್ರೇಲ್ ಫ್ರೆಂಡ್ಸ್ ಗ್ರೂಪ್ ನೀಡಿದ ನೆರವು ಹಸ್ತಾಂತರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*