ಬಂಟ್ವಾಳ

ಬ್ರಹ್ಮಶ್ರೀ ನಾರಾಯಣಗುರುಗಳು ಸಾರಿದ ಮೌಲ್ಯಗಳ ಅನುಷ್ಠಾನ ಅಗತ್ಯ: ರಮೇಶ್ ತುಂಬೆ

ಬಂಟ್ವಾಳ: ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ. ಓರ್ವ ಸಾಧಕನ‌ ನೆಲೆ ಮತ್ತು ಬೆಲೆಗಳೆರಡೂ ಮಹತ್ವ ಪಡೆದುಕೊಳ್ಳುವುದು ಆತನಿದ್ದ ಕಾಲಕ್ಕಿಂತಲೂ ಆತನಿಲ್ಲದ ಕಾಲದಲ್ಲಿ ಅದು ಕಾರ್ಯೋನ್ಮುಖ ಗೊಳ್ಳುವುದರಲ್ಲಿ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್ ತುಂಬೆ ತಿಳಿಸಿದರು.

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಬಿ.ಸಿ.ರೋಡ್ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ಜರುಗಿದ ಬ್ರಹ್ಮಶ್ರೀ ನಾರಾಯಣಗುರುಗಳ 168ನೇ  ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು

ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ರಾಜೇಶ್ ಬಿ ಸಮಾರಂಭ ಉದ್ಘಾಟಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕೋಶಾಧಿಕಾರಿ ಉಮೇಶ್ ಸುವರ್ಣ ತುಂಬೆ, ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ನಾಗೇಶ್ ಪೂಜಾರಿ ನೈಬೇಲು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ನಾಗೇಶ್ ಏಲಾಬೆ, ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯ ಮೇಲ್ವಿಚಾರಕರಾದ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು, ಸಿಹಿ ತಿಂಡಿ ಹಾಗೂ ಶಾಲಾ ಸಾಮಗ್ರಿಗಳನ್ನು ವಿತರಿಸಲಾಯಿತು. ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಬಿ.ಶ್ರೀಧರ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು, ಉಪಾಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ಧನ್ಯವಾದ ನೀಡಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ