ಮಾರಕಾಯುಧದಿಂದ ಸ್ವಂತ ಅಣ್ಱನನ್ನೇ ಹತ್ಯೆ ನಡೆಸಿದ ಆರೋಪದಲ್ಲಿ ತಮ್ಮನೀಗ ವಿಟ್ಲ ಪೊಲೀಸರ ವಶದಲ್ಲಿದ್ದಾನೆ.ಸೆ.13ರಂದು ರಾತ್ರಿ ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಬನಾರಿ ಎಂಬಲ್ಲಿ ಘಟನೆ ನಡೆದಿದೆ. ಕೊಡಂಗೆ ಬನಾರಿ ಮನೆಯ ಶೀನಪ್ಪ ದೇವಾಡಿಗ ಅವರ ಪುತ್ರ ಗಣೇಶ್ ಬಂಗೇರ (54) ಸಾವನ್ನಪ್ಪಿದವರು. ಅವರ ಸಹೋದರ ಪದ್ಮನಾಭ ಬಂಗೇರ (49) ಆರೋಪಿ.
ಪೂರ್ವದ್ವೇಷದಿಂದ ಈ ಘಟನೆ ನಡೆದಿದೆ ಎನ್ನಲಾಗಿದ್ದು, ತನಿಖೆ ಸಾಗಿದೆ. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಎಡಿಶನಲ್ ಎಸ್ಪಿ ಕುಮಾರ್ ಚಂದ್ರ, ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕಾಗಮಿಸಿ, ತನಿಖೆ ನಡೆಸಿ, ಮಾಹಿತಿ ಸಂಗ್ರಹಿಸಿದರು. ರಾತ್ರಿ ಸಮಯದಲ್ಲಿ ಪದ್ಮನಾಭ ಗಣೇಶ್ ಬಂಗೇರರವರನ್ನು ತಲೆ,ಎದೆ ಹಾಗೂ ಮುಖಕ್ಕೆ ಯಾವುದೋ ಆಯುಧದಿಂದ ಕೊಲೆ ಮಾಡುವ ಉದ್ದೇಶದಿಂದ ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿ ಕೊಲೆ ಮಾಡಿದ್ದು ಆ ಬಳಿಕ ಮೃತ ದೇಹದ ಬಟ್ಟೆಗಳನ್ನು ಹಾಗೂ ಮೃತ ದೇಹವನ್ನು ಸ್ವಚ್ಚಗೊಳಿಸಿ ಮಲಗುವ ಕೋಣೆಯ ಮಂಚದ ಮೇಲೆ ಮಲಗಿಸಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಅಣ್ಣನನ್ನೇ ಕೊಂದ ಆರೋಪದಲ್ಲಿ ತಮ್ಮ ವಿಟ್ಲ ಪೊಲೀಸ್ ವಶಕ್ಕೆ"
Be the first to comment on "ಅಣ್ಣನನ್ನೇ ಕೊಂದ ಆರೋಪದಲ್ಲಿ ತಮ್ಮ ವಿಟ್ಲ ಪೊಲೀಸ್ ವಶಕ್ಕೆ"