ವಿಟ್ಲ

ಅಣ್ಣನನ್ನೇ ಕೊಂದ ಆರೋಪದಲ್ಲಿ ತಮ್ಮ ವಿಟ್ಲ ಪೊಲೀಸ್ ವಶಕ್ಕೆ

ಮಾರಕಾಯುಧದಿಂದ ಸ್ವಂತ ಅಣ್ಱನನ್ನೇ ಹತ್ಯೆ ನಡೆಸಿದ ಆರೋಪದಲ್ಲಿ ತಮ್ಮನೀಗ ವಿಟ್ಲ ಪೊಲೀಸರ ವಶದಲ್ಲಿದ್ದಾನೆ.ಸೆ.13ರಂದು ರಾತ್ರಿ ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಬನಾರಿ ಎಂಬಲ್ಲಿ ಘಟನೆ ನಡೆದಿದೆ. ಕೊಡಂಗೆ ಬನಾರಿ ಮನೆಯ ಶೀನಪ್ಪ ದೇವಾಡಿಗ ಅವರ ಪುತ್ರ ಗಣೇಶ್ ಬಂಗೇರ (54) ಸಾವನ್ನಪ್ಪಿದವರು. ಅವರ ಸಹೋದರ ಪದ್ಮನಾಭ ಬಂಗೇರ (49) ಆರೋಪಿ.

ಪೂರ್ವದ್ವೇಷದಿಂದ ಈ ಘಟನೆ ನಡೆದಿದೆ ಎನ್ನಲಾಗಿದ್ದು, ತನಿಖೆ ಸಾಗಿದೆ. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಎಡಿಶನಲ್ ಎಸ್ಪಿ ಕುಮಾರ್ ಚಂದ್ರ, ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕಾಗಮಿಸಿ, ತನಿಖೆ ನಡೆಸಿ, ಮಾಹಿತಿ ಸಂಗ್ರಹಿಸಿದರು. ರಾತ್ರಿ ಸಮಯದಲ್ಲಿ ಪದ್ಮನಾಭ ಗಣೇಶ್ ಬಂಗೇರರವರನ್ನು ತಲೆ,ಎದೆ ಹಾಗೂ ಮುಖಕ್ಕೆ ಯಾವುದೋ ಆಯುಧದಿಂದ ಕೊಲೆ ಮಾಡುವ ಉದ್ದೇಶದಿಂದ ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿ ಕೊಲೆ ಮಾಡಿದ್ದು ಆ ಬಳಿಕ ಮೃತ ದೇಹದ ಬಟ್ಟೆಗಳನ್ನು ಹಾಗೂ ಮೃತ ದೇಹವನ್ನು ಸ್ವಚ್ಚಗೊಳಿಸಿ ಮಲಗುವ ಕೋಣೆಯ ಮಂಚದ ಮೇಲೆ ಮಲಗಿಸಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ