ಸಂಗೀತ ರಸಮಂಜರಿ ಕಾರ್ಯಕ್ರಮದೊಂದಿಗೆ ಜೋಡುಮಾರ್ಗ ಜೇಸಿ ಸಪ್ತಾಹ 2022ಕ್ಕೆ ತೆರೆ

ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಗುರುವಾರ ಸಂಜೆ ಸಂಗೀತ ರಸಮಂಜರಿ ಏರ್ಪಡಿಸುವುದರೊಂದಿಗೆ ಸೆ.9ರಂದು ಆರಂಭಗೊಂಡಿದ್ದ ಜೇಸಿ ಸಪ್ತಾಹ 2022ಕ್ಕೆ ತೆರೆ ಬಿದ್ದಿದೆ. ಜೋಡುಮಾರ್ಗ ಜೇಸಿ ವತಿಯಿಂದ ಆಯೋಜಿಸಲಾದ ಸಪ್ತಾಹ ಹಲವು ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಅಧ್ಯಕ್ಷ ಹರಿಪ್ರಸಾದ್ ಕುಲಾಲ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ನಿರ್ದೇಶಕಿ ಗಾಯತ್ರಿ ಲೋಕೇಶ್, ಕಾರ್ಯದರ್ಶಿ ಕಿಶನ್ ರಾವ್, ಪೂರ್ವಾಧ್ಯಕ್ಷರಾದ ರಾಮಚಂದ್ರ ರಾವ್, ಅಹಮದ್ ಮುಸ್ತಫಾ, ಮಹಮ್ಮದ್, ಸತ್ಯನಾರಾಯಣ ರಾವ್, ರಾಘವೇಂದ್ರ ಹೊಳ್ಳ, ಹರ್ಷರಾಜ್, ವಸಂತ್, ಶ್ರೀನಿಧಿ ಭಟ್, ಕೃಷ್ಣರಾಜ ಭಟ್, ಜಯಾನಂದ ಪೆರಾಜೆ, ನಿಕಟಪೂರ್ವ ಅಧ್ಯಕ್ಷೆ ಶೈಲಜಾ ರಾಜೇಶ್ ಸಹಿತ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ಜೇಸಿ ಸಪ್ತಾಹದಂಗವಾಗಿ ನೀಡುವ 2022ರ ಜೇಸಿ ಕಮಲಪತ್ರವನ್ನು ಪೂರ್ವಾಧ್ಯಕ್ಷ ಹರ್ಷರಾಜ್ ಅವರಿಗೆ ನೀಡಿ ಗೌರವಿಸಲಾಯಿತು. ಸಪ್ತಾಹದ ಅಂಗವಾಗಿ ಕೋಸ್ಟಲ್ ಬುಲೆಟಿನ್ ಸುದ್ದಿ ಜಾಲತಾಣದ ಸಂಪಾದಕ ಸಂತೋಷ್ ನೆತ್ತರಕೆರೆ ಮತ್ತು ಜೇಸಿ ಸದಸ್ಯ ಹರೀಶ ಮಾಂಬಾಡಿ ಅವರನ್ನು ಸನ್ಮಾನಿಸಲಾಯಿತು. ಮಿಥುನ್ ರಾಜ್ ವಿದ್ಯಾಪುರ ಅವರ ಶ್ರೀರಾಜ್ ಮ್ಯೂಸಿಕಲ್ ವರ್ಲ್ಡ್ ಅವರಿಂದ ಜೋಡುಮಾರ್ಗ ಮ್ಯೂಸಿಕಲ್ ನೈಟ್ ನಲ್ಲಿ ಕನ್ನಡ ಮತ್ತು ತುಳು ಹಾಡುಗಳನ್ನು ಮಹಿಮಾ ಮಂಗಳೂರು, ಮಿಥುನ್ ರಾಜ್ ವಿದ್ಯಾಪುರ, ಚೈತ್ರಾ ಕಡಂಬಾರ್, ದಿನೇಶ್ ಕರೋಪಾಡಿ ಹಾಡಿದರು. ಕೀಬೋರ್ಡ್ ನಲ್ಲಿ ಬಾಬಣ್ಣ ಪುತ್ತೂರು ಮತ್ತು ರಿದಂ ಪ್ಯಾಡ್ ನಲ್ಲಿ ರವಿಕಾಂತ್ ಕಾಸರಗೋಡು ಸಹಕರಿಸಿದರು. ಮಂಜು ರೈ ಮುಳೂರು ಕಾರ್ಯಕ್ರಮ ನಿರ್ವಹಿಸಿದರು.

ವೈವಿಧ್ಯಮಯ ಕಾರ್ಯಕ್ರಮ: ಸೆ.9ರಂದು ರೋಟರಿ ಟೌನ್ ಸಹಯೋಗದೊಂದಿಗೆ ದಂತ ಆರೋಗ್ಯ ಪರೀಕ್ಷೆ ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ನಡೆದರೆ, ಅದೇ ದಿನ ಸಂಜೆ ಪೂರ್ವಾಧ್ಯಕ್ಷ ಹರ್ಷರಾಜ್ ಪ್ರಾಯೋಜಕತ್ವದಲ್ಲಿ ಪೊಳಲಿ ಶ್ರೀ ರಾಮಕೃಷ್ಣಾಶ್ರಮದಲ್ಲಿ ಆಹಾರ ವಿತರಣೆ ನಡೆಯಿತು. ಬಳಿಕ ರೋಟರಿ ಕ್ಲಬ್ ಬಂಟ್ವಾಳ ಟೌನ್ ಜೊತೆ ಜಂಟಿ ಸಭೆ ಮತ್ತು ಮಹಿಳಾ ಸಾಧಕರಿಗೆ ಗೌರವಾರ್ಪಣೆ  ಪ್ರೀತಿ ಕಾಂಪ್ಲೆಕ್ಸ್ ಬಿ.ಸಿ.ರೋಡುನಲ್ಲಿ ನಡೆಯಿತು.

ಜಾಹೀರಾತು

ಸೆ.10ರಂದು ಮೊಡಂಕಾಪು ದೀಪಿಕಾ ಪ್ರೌಢಶಾಲೆಯಲ್ಲಿ ಕ್ರೀಡಾಸ್ಪರ್ಧೆ, ನಾವೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ಘಟಕ ಕೊಡುಗೆ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಸೆ.11ರಂದು  ಪರಿಣಾಮಕಾರಿ ಭಾಷಣ ಕಲೆ ಕಾರ್ಯಾಗಾರ ಮತ್ತು ಹಿರಿಯ ಜೇಸಿಗಳೊಂದಿಗೆ ಸಂವಾದ ನಡೆದವು.  ಪರಿಣಾಮಕಾರಿ ಭಾಷಣ ಕಲೆ ಕುರಿತು ಪೂರ್ವಾಧ್ಯಕ್ಷರೂ ಆಗಿರುವ ಡಾ. ರಾಘವೇಂದ್ರ ಹೊಳ್ಳ ನಡೆಸಿಕೊಟ್ಟರೆ, ವಿಕ್ರಮ್ ನಾಯಕ್ ಸಹಕರಿಸಿದರು. 2ರಂದು ಸೈಬರ್ ಅಪರಾಧಗಳು ಕಾನೂನು ಮಾಹಿತಿ ಕಾರ್ಯಕ್ರಮ ಶಂಭೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದು, ನ್ಯಾಯವಾದಿ ರವೀಂದ್ರ ಕುಕ್ಕಾಜೆ ನಡೆಸಿಕೊಟ್ಟರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಂಗೀತ ರಸಮಂಜರಿ ಕಾರ್ಯಕ್ರಮದೊಂದಿಗೆ ಜೋಡುಮಾರ್ಗ ಜೇಸಿ ಸಪ್ತಾಹ 2022ಕ್ಕೆ ತೆರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*